3:45 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ರಾಜ್ಯದ ಎಲ್ಲ 224 ಕ್ಷೇತ್ರ ನಮ್ಮ ಟಾರ್ಗೆಟ್, ಸಿಎಂ ಅಭ್ಯರ್ಥಿ ಬಗ್ಗೆ ಯಾರು ಮಾತನಾಡಬಾರದು: ಡಿ.ಕೆ. ಶಿವಕುಮಾರ್

04/07/2021, 18:43

ಬೆಂಗಳೂರು(reporterkarnataka news):

ಕಾಂಗ್ರೆಸ್ ಪಕ್ಷಕ್ಕೆ  ದೇಶದ ಇತಿಹಾಸದಲ್ಲೇ ಪುರಾತನ ಇತಿಹಾಸವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಡಿಪಾಯ ಗಟ್ಟಿಯಾಗಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ 224 ಸ್ಥಾನಗಳನ್ನು ಗೆಲ್ಲುವುದು ನಮ್ಮ ಟಾರ್ಗೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಹೇಳಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ, ಜನರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದರು.

ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರವರೆಗೂ ಭ್ರಷ್ಟಾಚಾರ ತಾರಕಕ್ಕೇರಿದೆ. ಸಚಿವರ ಪಿಎಗಳಿಂದ ಹಿಡಿದು ತಾಲೂಕು ಮಟ್ಟದ ತಹಶೀಲ್ದಾರ್ ಕಚೇರಿವರೆಗೂ ಲಂಚಕ್ಕೆ ಬೇಡಿಕೆ ಇಡಲಾಗುತ್ತಿದೆ. ಬಿಜೆಪಿ ಆಡಳಿತಕ್ಕೆ ಜನರು ಹೈರಾಣಾಗಿದ್ದಾರೆ ಎಂದು ಅವರು ಕಿಡಿಕಾರಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೆಪಿಸಿಸಿ ಅಧ್ಯಕ್ಷನಾಗಿ ನಾನು ಯಾರೊಬ್ಬರ ಇಂತಹ ಹೇಳಿಕೆಗಳಿಗೂ ಮಹತ್ವ ಕೊಡಲ್ಲ. ಶಾಸಕ ಜಮೀರ್ ಅಹ್ಮದ್ ಹೇಳಿಕೆಯಿಂದ ಹಿಡಿದು ಸಂಸದ ಡಿ.ಕೆ ಸುರೇಶ್ ಹೇಳಿಕೆವರೆಗೂ ಯಾರೊಬ್ಬರ ಹೇಳಿಕೆಗೂ ಪ್ರತಿಕ್ರಿಯಿಸಲ್ಲ. ಪಕ್ಷದ ಮುಖಂಡರು ವೈಯಕ್ತಿಕ ಅಭಿಪ್ರಾಯಗಳನ್ನು ಕೊಡುವ ಬದಲು ತಮ್ಮ ತಮ್ಮ ಕ್ಷೇತ್ರಗಳಿಗೆ ತೆರಳಿ ಜನರ ಸಂಕಷ್ಟಗಳನ್ನು ಆಲಿಸಿ ಅಭಿವೃದ್ಧಿಯತ್ತ, ಪಕ್ಷ ಸಂಘಟನೆಯತ್ತ ಗಮನಕೊಡಲಿ. ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವಾಗಿ ಯಾರೂ ಮಾತನಾಡಬಾರದು. ಪಕ್ಷವನ್ನು ಅಧಿಕಾರಕ್ಕೆ ತರುವನಿಟ್ಟಿನಲ್ಲಿ ಮಾತ್ರ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ಪಕ್ಷಬಿಟ್ಟು ಹೋದವರು ಮರಳಿ ಪಕ್ಷಕ್ಕೆ ಬರಲು ಅವಕಾಶವಿದೆ. ಬಿಟ್ಟುಹೋದವರು ಮೊದಲು ಅರ್ಜಿ ಹಾಕಲಿ. ಅರ್ಜಿ ಹಾಕಿದರೆ ನಂತರ ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು