11:55 PM Monday4 - May 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ…

ಇತ್ತೀಚಿನ ಸುದ್ದಿ

ರಾಜ್ಯದ ಎಲ್ಲ 224 ಕ್ಷೇತ್ರ ನಮ್ಮ ಟಾರ್ಗೆಟ್, ಸಿಎಂ ಅಭ್ಯರ್ಥಿ ಬಗ್ಗೆ ಯಾರು ಮಾತನಾಡಬಾರದು: ಡಿ.ಕೆ. ಶಿವಕುಮಾರ್

04/07/2021, 18:43

ಬೆಂಗಳೂರು(reporterkarnataka news):

ಕಾಂಗ್ರೆಸ್ ಪಕ್ಷಕ್ಕೆ  ದೇಶದ ಇತಿಹಾಸದಲ್ಲೇ ಪುರಾತನ ಇತಿಹಾಸವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಡಿಪಾಯ ಗಟ್ಟಿಯಾಗಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ 224 ಸ್ಥಾನಗಳನ್ನು ಗೆಲ್ಲುವುದು ನಮ್ಮ ಟಾರ್ಗೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಹೇಳಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ, ಜನರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದರು.

ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರವರೆಗೂ ಭ್ರಷ್ಟಾಚಾರ ತಾರಕಕ್ಕೇರಿದೆ. ಸಚಿವರ ಪಿಎಗಳಿಂದ ಹಿಡಿದು ತಾಲೂಕು ಮಟ್ಟದ ತಹಶೀಲ್ದಾರ್ ಕಚೇರಿವರೆಗೂ ಲಂಚಕ್ಕೆ ಬೇಡಿಕೆ ಇಡಲಾಗುತ್ತಿದೆ. ಬಿಜೆಪಿ ಆಡಳಿತಕ್ಕೆ ಜನರು ಹೈರಾಣಾಗಿದ್ದಾರೆ ಎಂದು ಅವರು ಕಿಡಿಕಾರಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೆಪಿಸಿಸಿ ಅಧ್ಯಕ್ಷನಾಗಿ ನಾನು ಯಾರೊಬ್ಬರ ಇಂತಹ ಹೇಳಿಕೆಗಳಿಗೂ ಮಹತ್ವ ಕೊಡಲ್ಲ. ಶಾಸಕ ಜಮೀರ್ ಅಹ್ಮದ್ ಹೇಳಿಕೆಯಿಂದ ಹಿಡಿದು ಸಂಸದ ಡಿ.ಕೆ ಸುರೇಶ್ ಹೇಳಿಕೆವರೆಗೂ ಯಾರೊಬ್ಬರ ಹೇಳಿಕೆಗೂ ಪ್ರತಿಕ್ರಿಯಿಸಲ್ಲ. ಪಕ್ಷದ ಮುಖಂಡರು ವೈಯಕ್ತಿಕ ಅಭಿಪ್ರಾಯಗಳನ್ನು ಕೊಡುವ ಬದಲು ತಮ್ಮ ತಮ್ಮ ಕ್ಷೇತ್ರಗಳಿಗೆ ತೆರಳಿ ಜನರ ಸಂಕಷ್ಟಗಳನ್ನು ಆಲಿಸಿ ಅಭಿವೃದ್ಧಿಯತ್ತ, ಪಕ್ಷ ಸಂಘಟನೆಯತ್ತ ಗಮನಕೊಡಲಿ. ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವಾಗಿ ಯಾರೂ ಮಾತನಾಡಬಾರದು. ಪಕ್ಷವನ್ನು ಅಧಿಕಾರಕ್ಕೆ ತರುವನಿಟ್ಟಿನಲ್ಲಿ ಮಾತ್ರ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ಪಕ್ಷಬಿಟ್ಟು ಹೋದವರು ಮರಳಿ ಪಕ್ಷಕ್ಕೆ ಬರಲು ಅವಕಾಶವಿದೆ. ಬಿಟ್ಟುಹೋದವರು ಮೊದಲು ಅರ್ಜಿ ಹಾಕಲಿ. ಅರ್ಜಿ ಹಾಕಿದರೆ ನಂತರ ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು