11:52 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ರಾಜ್ಯದ ಎಲ್ಲ 224 ಕ್ಷೇತ್ರ ನಮ್ಮ ಟಾರ್ಗೆಟ್, ಸಿಎಂ ಅಭ್ಯರ್ಥಿ ಬಗ್ಗೆ ಯಾರು ಮಾತನಾಡಬಾರದು: ಡಿ.ಕೆ. ಶಿವಕುಮಾರ್

04/07/2021, 18:43

ಬೆಂಗಳೂರು(reporterkarnataka news):

ಕಾಂಗ್ರೆಸ್ ಪಕ್ಷಕ್ಕೆ  ದೇಶದ ಇತಿಹಾಸದಲ್ಲೇ ಪುರಾತನ ಇತಿಹಾಸವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಡಿಪಾಯ ಗಟ್ಟಿಯಾಗಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ 224 ಸ್ಥಾನಗಳನ್ನು ಗೆಲ್ಲುವುದು ನಮ್ಮ ಟಾರ್ಗೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಹೇಳಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ, ಜನರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದರು.

ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರವರೆಗೂ ಭ್ರಷ್ಟಾಚಾರ ತಾರಕಕ್ಕೇರಿದೆ. ಸಚಿವರ ಪಿಎಗಳಿಂದ ಹಿಡಿದು ತಾಲೂಕು ಮಟ್ಟದ ತಹಶೀಲ್ದಾರ್ ಕಚೇರಿವರೆಗೂ ಲಂಚಕ್ಕೆ ಬೇಡಿಕೆ ಇಡಲಾಗುತ್ತಿದೆ. ಬಿಜೆಪಿ ಆಡಳಿತಕ್ಕೆ ಜನರು ಹೈರಾಣಾಗಿದ್ದಾರೆ ಎಂದು ಅವರು ಕಿಡಿಕಾರಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೆಪಿಸಿಸಿ ಅಧ್ಯಕ್ಷನಾಗಿ ನಾನು ಯಾರೊಬ್ಬರ ಇಂತಹ ಹೇಳಿಕೆಗಳಿಗೂ ಮಹತ್ವ ಕೊಡಲ್ಲ. ಶಾಸಕ ಜಮೀರ್ ಅಹ್ಮದ್ ಹೇಳಿಕೆಯಿಂದ ಹಿಡಿದು ಸಂಸದ ಡಿ.ಕೆ ಸುರೇಶ್ ಹೇಳಿಕೆವರೆಗೂ ಯಾರೊಬ್ಬರ ಹೇಳಿಕೆಗೂ ಪ್ರತಿಕ್ರಿಯಿಸಲ್ಲ. ಪಕ್ಷದ ಮುಖಂಡರು ವೈಯಕ್ತಿಕ ಅಭಿಪ್ರಾಯಗಳನ್ನು ಕೊಡುವ ಬದಲು ತಮ್ಮ ತಮ್ಮ ಕ್ಷೇತ್ರಗಳಿಗೆ ತೆರಳಿ ಜನರ ಸಂಕಷ್ಟಗಳನ್ನು ಆಲಿಸಿ ಅಭಿವೃದ್ಧಿಯತ್ತ, ಪಕ್ಷ ಸಂಘಟನೆಯತ್ತ ಗಮನಕೊಡಲಿ. ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವಾಗಿ ಯಾರೂ ಮಾತನಾಡಬಾರದು. ಪಕ್ಷವನ್ನು ಅಧಿಕಾರಕ್ಕೆ ತರುವನಿಟ್ಟಿನಲ್ಲಿ ಮಾತ್ರ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ಪಕ್ಷಬಿಟ್ಟು ಹೋದವರು ಮರಳಿ ಪಕ್ಷಕ್ಕೆ ಬರಲು ಅವಕಾಶವಿದೆ. ಬಿಟ್ಟುಹೋದವರು ಮೊದಲು ಅರ್ಜಿ ಹಾಕಲಿ. ಅರ್ಜಿ ಹಾಕಿದರೆ ನಂತರ ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು