5:05 AM Monday3 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದು: ವಿದ್ಯಾರ್ಥಿಗಳಿಗೆ ಬೇರೆ ಸಂಸ್ಥೆಗಳಲ್ಲಿ ಪ್ರವೇಶ

21/08/2021, 09:31

ಬೆಂಗಳೂರು(reporterkarnataka.com):
ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದುಪಡಿಸಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, 2021 -22ನೇ ಸಾಲಿನಿಂದ ಈ ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದೆ. ಹಾಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಬೇರೆ ಕಾಲೇಜುಗಳಲ್ಲಿ ಪ್ರವೇಶ ನೀಡಲಿದೆ. 

ಅಲ್ಫಾ ಕಾಲೇಜ್ ಆಫ್ ಎಂಜಿನಿಯರಿಂಗ್, ಬೆಂಗಳೂರು, ಶೇಖ್ ಕಾಲೇಜ್ ಆಫ್ ಎಂಜಿನಿಯರಿಂಗ್, ಬೆಳಗಾವಿ,  ಇಸ್ಲಾಮಿಯಾ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು, ಏಕಲವ್ಯ ಇನ್ ಸ್ಟಿಟ್ಟೂಟ್ ಆಫ್ ಟೆಕ್ನಾಲಜಿ, ಚಾಮರಾಜ ನಗರ, ಶ್ರೀ ವಿನಾಯಕ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕೆಜಿಎಫ್, ಬಿಟಿಎಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ ಮೆಂಟ್ ಬೆಂಗಳೂರು ಇವು 2021- 22ನೇ ಸಾಲಿಗೆ ಮಾನ್ಯತೆ ಇಲ್ಲದ ಕಾಲೇಜುಗಳು.

ಮಾನ್ಯತೆ ಕಳೆದುಕೊಂಡ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬೇರೆ ಕಾಲೇಜುಗಳಲ್ಲಿ ಪ್ರವೇಶ ನೀಡಲಾಗುವುದು. ಈ ಕುರಿತು ಪ್ರತ್ಯೇಕ ಪ್ರಕಟಣೆ ಹೊರಡಿಸಲಾಗುವುದು. ಯಾರಾದರೂ ಈ ಕಾಲೇಜುಗಳಲ್ಲಿ ಪ್ರವೇಶ ಮುಂದುವರಿಸಿದರೆ ಅದಕ್ಕೆ ವಿಟಿಯು ಜವಾಬ್ದಾರವಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು