7:52 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರಾಜ್ಯದ ಹಲವೆಡೆ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ: ಹಲವು ಅಧಿಕಾರಿಗಳು  ಬಲೆಗೆ?

30/09/2022, 12:27

ಬೆಂಗಳೂರು(reporterkarnataka.com): ಲೋಕಾಯುಕ್ತ ಅಧಿಕಾರಿಗಳ ತಂಡ ರಾಜ್ಯದ ಹಲವೆಡೆ ಚೆಕ್ ಪೋಸ್ಟ್ ಗಳ ಮೇಲೆ ಏಕಕಾಲದಲ್ಲಿ ಇಂದು ಧಿಡೀರ್ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಸಾರಿಗೆ ಇಲಾಖಾಧಿಕಾರಿಗಳಿಗೆ ಶಾಕ್ ನೀಡಿದೆ.

ಬೀದರ್ ನ ಹುಮ್ನಾಬಾದ್, ಚೆಕ್ ಪೋಸ್ಟ್, ಬಳ್ಳಾರಿಯ ಹಗರಿ ಚೆಕ್ ಪೋಸ್ಟ್, ಅತ್ತಿಬೆಲೆಯ ಆರ್.ಟಿ.ಒ. ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೀದರ್ -ಕಲಬುರ್ಗಿ ಲೋಕಾಯುಕ್ತ ಎಸ್.ಪಿ. ನೇತೃತ್ವದ ತಂಡ ಬೆಳಗಿನ ಜಾವ ನಾಲ್ಕು ಗಂಟೆಗೆ ದಾಳಿ ನಡೆಸಿದ್ದು, ಚೆಕ್ ಪೋಸ್ಟ್ ನಲ್ಲಿ ಒಂದೂವರೆ ಲಕ್ಷ ರೂಪಾಯಿ ಪತ್ತೆಯಾಗಿದೆ. ಇದು ದಂಡದ ಹಣವೇ ಅಥವಾ ಲಂಚದ ಹಣವೇ ಎಂಬುದರ ಪರಿಶೀಲನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿಯಲ್ಲಿ ಬೆಂಗಳೂರು -ಮುಂಬೈ ರಾಷ್ಟ್ರೀಯ ಹೆದ್ದಾರಿ 4 ರಲ್ಲಿರುವ ಚೆಕ್ಪೋಸ್ಟ್ ಮೇಲೆ ದಾಳಿ ನಡೆಸಲಾಗಿದೆ. ವಿಜಯಪುರ ಹೊರವಲಯದ ಚೆಕ್ಪೋಸ್ಟ್ ಮೇಲೆಯೂ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು