1:34 PM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ರಾಜ್ಯದ ಪ್ರತಿ ತಾಲೂಕಿನಲ್ಲಿ ಮಕ್ಕಳ ಕೋವಿಡ್ ಕೇಂದ್ರ ಸ್ಥಾಪನೆ: ಸಚಿವೆ ಶಶಿಕಲಾ ಜೊಲ್ಲೆ

13/06/2021, 08:20

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಜ್ಯದ ಪ್ರತಿ ತಾಲೂಕಿನಲ್ಲಿ ಮಕ್ಕಳ ಕೋವಿಡ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮಹಿಳಾ ಮಕ್ಕಳ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಹೈಟೆಕ್ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವದ ಬಗ್ಗೆ ವೀಕ್ಷಿಸಿದ ಬಳಿಕ ಮಾಧ್ಯಮ ಜತೆ ಮಾತನಾಡಿದ ಅವರು, ಮಕ್ಕಳಿಗಾಗಿ ಕೋವಿಡ್ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದರು.

 ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ. ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಮೂರನೇ ಅಲೆ ಸಂಭವ ಇದ್ದು ಚಿಕ್ಕಮಕ್ಕಳಿಗೆ ಹೆಚ್ಚು ಪರಿಣಾಮ ಬೀರುತ್ತದೆ. ಅದಕ್ಕಾಗಿ ಮುಂಜಾಗ್ರತೆ ಸಲುವಾಗಿ ಪ್ರತಿ ತಾಲೂಕಿನಲ್ಲಿ ಮಕ್ಕಳ ಕೋವಿಡ್ ಕೇಂದ್ರಗಳನ್ನು ಆರಂಭ ಮಾಡುವುದಾಗಿ ನಿರ್ಧರಿಸಿದ್ದೇವೆ ಎಂದು ತಿಳಿಸಿದರು. 

ಈಗಾಗಲೇ ಚಿಕ್ಕಮಕ್ಕಳ ಕೋವಿಡ್ ಸೆಂಟರ್ ಗಳಿಗೆ 600 ಬೆಡ್ ಗಳನ್ನು ಈಗಾಗಲೇ ಕಲ್ಪಿಸಿದ್ದು, ಹಾಗೆ ಕೊರೊನಾದಿಂದ ತಂದೆ-ತಾಯಿ ಮರಣ ಹೊಂದಿ ಅನಾಥರಾದ 30 ಮಕ್ಕಳ ರಕ್ಷಣೆ ಮಾಡಿದ್ದೇವೆ. ಎಂದು ತಿಳಿಸಿದರು.

100 ಅಂಗನವಾಡಿ ಕೇಂದ್ರಗಳನ್ನು ಹೈಟೆಕ್ ಕೇಂದ್ರಗಳನ್ನಾಗಿ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.

ಸಿಂಧನೂರು ತಾಲೂಕಿನ ಗೊರೆಬಾಳ ಗ್ರಾಮ ಪಂಚಾಯಿತಿಯಲ್ಲಿ ಬರುವ ಬಾಲಯ್ಯ ಕ್ಯಾಂಪಿನಲ್ಲಿ ನರೇಗಾ ಯೋಜನೆಯಡಿಯಲ್ಲಿ ಚಿಕ್ಕಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪ ಬಗ್ಗೆ ಪ್ರತಿಕ್ರಿಯಿಸಿದ ಸಚಿವೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದರು.

ಗ್ರಾಮದ ಮೂರನೇ ಅಂಗನವಾಡಿ ಹೈಟೆಕ್ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು, ಮಕ್ಕಳು ಆನ್ಲೈನ್  ಮೂಲಕ ಕಲಿಕೆ ಆಗುವುದು. ಕಲಿತ ಚಟುವಟಿಕೆಗಳನ್ನು ಟಿವಿ ಮುಖಾಂತರ ನಡೆಸಲಾಗುವುದು. ಜೊತೆಗೆ ಚಿಕ್ಕ ಮಕ್ಕಳಿಗೆ ಕಲಿಕೆಯ ಬಗ್ಗೆ ಗಮನ ಹರಿಯುತ್ತದೆ ಎಂದು ತಿಳಿಸಿದರು.

ಈ ಸಂದರ್ಭದ ಶಾಸಕರು, ಸಂಸದರು, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು ಸೇರಿದಂತೆ ಇನ್ನಿತರ ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು