4:56 PM Saturday8 - November 2025
ಬ್ರೇಕಿಂಗ್ ನ್ಯೂಸ್
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್: ಬೃಹತ್ ಪ್ರತಿಭಟನಾ ಮೆರವಣಿಗೆ

11/09/2024, 19:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ
ರಾಜ್ಯ ಸರ್ಕಾರದ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಅಂಗಡಿ-ಮುಂಗಟ್ಟುಗಳನ್ನ ಮುಚ್ಚಿ ವರ್ತಕರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು. ರೈತರ ಹೋರಾಟಕ್ಕೆ ಸರ್ವ ಪಕ್ಷಗಳು ಸಾಥ್ ನೀಡಿದ್ದವು.


ಕನ್ನಡ, ದಲಿತ ಸಂಘಟನೆ ಸೇರಿ ಬಹುತೇಕ ಸಂಘಟನೆಗಳ ಬೆಂಬಲ ವ್ಯಕ್ತಪಡಿಸಿದ್ದವು.
ಬೆಳಗ್ಗೆ 10 ಗಂಟೆಗೆ ಕಳಸ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದಂತೆ ಆ ಮಾರ್ಗವಾಗಿ ಹೈಕೋರ್ಟ್ ನ್ಯಾಯಾಧೀಶರೊಬ್ಬರು ಹೊರನಾಡು ದೇಗುಲಕ್ಕೆ ತೆರಳವುದನ್ನು ಕಂಡು ಪ್ರತಿಭಟನಾಕಾರರು ನಮ್ಮ ನೋವು ನ್ಯಾಯಾಧೀಶರಿಗೂ ಕೇಳಲಿ ಎಂದರು.
ಬದುಕಿಗಾಗಿ ಮಾಡಿರುವ 2-3 ಎಕರೆ ಒತ್ತುವರಿಯೇ ಹೆಚ್ಚಾಗಿದೆಯೇ? ಒತ್ತುವರಿ ತೆರವು ಮಾಡಿದ್ರೆ ಸಾವಿರಾರು ಕುಟುಂಬಗಳು ಬೀದಿಗೆ ಬರಲಿವೆ ಎಂದು ಪ್ರತಿಭಟನಾಕಾರರು ಕಿಡಿ ಕಾರಿದರು. ತಾಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು