5:55 AM Monday11 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್: ಬೃಹತ್ ಪ್ರತಿಭಟನಾ ಮೆರವಣಿಗೆ

11/09/2024, 19:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ
ರಾಜ್ಯ ಸರ್ಕಾರದ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಅಂಗಡಿ-ಮುಂಗಟ್ಟುಗಳನ್ನ ಮುಚ್ಚಿ ವರ್ತಕರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು. ರೈತರ ಹೋರಾಟಕ್ಕೆ ಸರ್ವ ಪಕ್ಷಗಳು ಸಾಥ್ ನೀಡಿದ್ದವು.


ಕನ್ನಡ, ದಲಿತ ಸಂಘಟನೆ ಸೇರಿ ಬಹುತೇಕ ಸಂಘಟನೆಗಳ ಬೆಂಬಲ ವ್ಯಕ್ತಪಡಿಸಿದ್ದವು.
ಬೆಳಗ್ಗೆ 10 ಗಂಟೆಗೆ ಕಳಸ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದಂತೆ ಆ ಮಾರ್ಗವಾಗಿ ಹೈಕೋರ್ಟ್ ನ್ಯಾಯಾಧೀಶರೊಬ್ಬರು ಹೊರನಾಡು ದೇಗುಲಕ್ಕೆ ತೆರಳವುದನ್ನು ಕಂಡು ಪ್ರತಿಭಟನಾಕಾರರು ನಮ್ಮ ನೋವು ನ್ಯಾಯಾಧೀಶರಿಗೂ ಕೇಳಲಿ ಎಂದರು.
ಬದುಕಿಗಾಗಿ ಮಾಡಿರುವ 2-3 ಎಕರೆ ಒತ್ತುವರಿಯೇ ಹೆಚ್ಚಾಗಿದೆಯೇ? ಒತ್ತುವರಿ ತೆರವು ಮಾಡಿದ್ರೆ ಸಾವಿರಾರು ಕುಟುಂಬಗಳು ಬೀದಿಗೆ ಬರಲಿವೆ ಎಂದು ಪ್ರತಿಭಟನಾಕಾರರು ಕಿಡಿ ಕಾರಿದರು. ತಾಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು