3:45 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ರಾಜ್ಯದ ಎಲ್ಲ ಶಾಲೆಗಳಲ್ಲಿ ನವೆಂಬರ್ 1ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ಆರಂಭ

02/10/2021, 12:25

ಬೆಂಗಳೂರು(reporterkarnataka.com): ನವೆಂಬರ್ 1ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ವಿತರಣೆ ಮಾಡುವ ಮೂಲಕ ರಾಜ್ಯದ ಶಾಲೆಗಳಲ್ಲಿ ಸ್ಥಗಿತಗೊಂಡಿದ್ದ

ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ವಿಧ್ಯುಕ್ತವಾಗಿ ಆರಂಭಿಸೋದಕ್ಕೆ ರಾಜ್ಯ ಸರಕಾರ ಆದೇಶಿಸಿದೆ.

ದಿನಪೂರ್ತಿ ತರಗತಿಯ ನಡೆಸುವಂತೆ ಸುತ್ತೋಲೆ ಹೊರಡಿಸಿದ ಬಳಿಕ ಈಗ ಮತ್ತೆ ನ.1ರಿಂದ ಬಿಸಿಯೂಟ, ಬಿಸಿ ಹಾಲು ಪ್ರಾಂಭಿಸುವ ಮೂಲಕ ಪೂರ್ಣ ಪ್ರಮಾಣದ ಶಾಲೆಯು ಪ್ರಾರಂಭಿಸಿದಂತಾಗುತ್ತದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಧ್ಯಾಹ್ನ ಉಪಹಾರ ಯೋಜನೆ ಜಂಟಿ ನಿರ್ದೇಶಕರಾದಂತ ಟಿ.ನಾರಾಯಣಗೌಡ ರಾಜ್ಯದ ಎಲ್ಲಾ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದ್ದು, 2021-22ನೇ ಸಾಲಿನ ಮಧ್ಯಾಹ್ನ ಉಪಹಾರ ಯೋಜನೆಯಡಿ 1ರಿಂದ 10ನೇ ತರಗತಿ ಮಕ್ಕಳಿಗೆ ಶಾಲೆಯಲ್ಲಿ ಬಿಸಿಯೂಟವನ್ನು ಪ್ರಾರಂಭಿಸುವ ಕುರಿತು ಸರ್ಕಾರದ ಹಂತದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕಾಗಿದ್ದು, ಕೆಲವೊಂದು ಕ್ರಮಗಳನ್ನು ಅನುಸರಿಸುವ ಬಗ್ಗೆ ಕರಡು ಪ್ರಸ್ತಾವನೆಯನ್ನು ನಿಮ್ಮ ಅಭಿಪ್ರಾಯ ಅಥವಾ ಸಲಹೆಗಳೇನಾದರೂ ಇದ್ದಲ್ಲಿ ಕೂಡಲೇ ಅ.10 ರೊಳಗೆ ಸಲ್ಲಿಸಲು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು