1:33 AM Friday20 - June 2025
ಬ್ರೇಕಿಂಗ್ ನ್ಯೂಸ್
Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಅನಧಿಕೃತವಾಗಿ ವಾಸವಿದ್ದ 24 ಪಾಕ್, 159 ಬಾಂಗ್ಲಾದೇಶ ಮೂಲದವರ ಬಂಧನ: ಗೃಹ ಸಚಿವ ಡಾ. ಜಿ. ಪರಮೇಶ್ವರ್

19/12/2024, 13:28

ಬೆಳಗಾವಿಸುವರ್ಣಸೌಧ, (reporterkarnataka.com): ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರ ಮತ್ತು ರಾಜ್ಯದಲ್ಲಿ
ಅನಧಿಕೃತವಾಗಿ ವಾಸವಿದ್ದ 24 ಪಾಕ್ ಮತ್ತು 159 ಬಾಂಗ್ಲಾದೇಶ ಮೂಲದವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಿ. ಎಸ್. ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯಕ್ಕೆ ಪದೇ ಪದೇ ಅನಧಿಕೃತವಾಗಿ ಪ್ರವೇಶಿಸುವ ಇಂತಹ ಪ್ರಕರಣಗಳ ಬಗ್ಗೆ ನಿಗಾವಹಿಸಲು ಬೆಂಗಳೂರು ನಗರದಲ್ಲಿ ನಗರ ವಿಶೇಷ ಘಟಕವಿದ್ದು, ನಗರಕ್ಕೆ ಪ್ರವೇಶಿಸುವ ಯಾವುದೇ ವಿದೇಶಿಯರ ಬಗ್ಗೆ ಪೊಲೀಸ್ ಠಾಣೆಗಳ ಮೂಲಕ, ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್. ಆರ್. ಆರ್. ಓ ) ಬೆಂಗಳೂರು ರವರಿಂದ ಮಾಹಿತಿಯನ್ನು ಪಡೆದು, ಪ್ರತಿ ವಿಭಾಗೀಯ ಡಿಸಿಪಿಗಳ ಮುಖಾಂತರ ವಿಶೇಷ ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ. ಅಲ್ಲದೆ, ಸಿ.ಸಿ.ಬಿಯ ಸಂಘಟಿತ ಅಪರಾಧ ದಳ ಕೂಡ ಕಾರ್ಯಾಚರಣೆ ನಡೆಸುತ್ತಿದೆ. ಇತರೆ ನಗರ /ಜಿಲ್ಲೆಗಳಲ್ಲಿ ಅನಧಿಕೃತವಾಗಿ ಪ್ರವೇಶಿಸುವ ವಿದೇಶಿಯರುಗಳ ಪತ್ತೆಯ ಬಗ್ಗೆ Special Task force ರಚಿಸಿದ್ದು, ಅದು ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು