4:58 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಅನಧಿಕೃತವಾಗಿ ವಾಸವಿದ್ದ 24 ಪಾಕ್, 159 ಬಾಂಗ್ಲಾದೇಶ ಮೂಲದವರ ಬಂಧನ: ಗೃಹ ಸಚಿವ ಡಾ. ಜಿ. ಪರಮೇಶ್ವರ್

19/12/2024, 13:28

ಬೆಳಗಾವಿಸುವರ್ಣಸೌಧ, (reporterkarnataka.com): ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರ ಮತ್ತು ರಾಜ್ಯದಲ್ಲಿ
ಅನಧಿಕೃತವಾಗಿ ವಾಸವಿದ್ದ 24 ಪಾಕ್ ಮತ್ತು 159 ಬಾಂಗ್ಲಾದೇಶ ಮೂಲದವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಿ. ಎಸ್. ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯಕ್ಕೆ ಪದೇ ಪದೇ ಅನಧಿಕೃತವಾಗಿ ಪ್ರವೇಶಿಸುವ ಇಂತಹ ಪ್ರಕರಣಗಳ ಬಗ್ಗೆ ನಿಗಾವಹಿಸಲು ಬೆಂಗಳೂರು ನಗರದಲ್ಲಿ ನಗರ ವಿಶೇಷ ಘಟಕವಿದ್ದು, ನಗರಕ್ಕೆ ಪ್ರವೇಶಿಸುವ ಯಾವುದೇ ವಿದೇಶಿಯರ ಬಗ್ಗೆ ಪೊಲೀಸ್ ಠಾಣೆಗಳ ಮೂಲಕ, ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್. ಆರ್. ಆರ್. ಓ ) ಬೆಂಗಳೂರು ರವರಿಂದ ಮಾಹಿತಿಯನ್ನು ಪಡೆದು, ಪ್ರತಿ ವಿಭಾಗೀಯ ಡಿಸಿಪಿಗಳ ಮುಖಾಂತರ ವಿಶೇಷ ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ. ಅಲ್ಲದೆ, ಸಿ.ಸಿ.ಬಿಯ ಸಂಘಟಿತ ಅಪರಾಧ ದಳ ಕೂಡ ಕಾರ್ಯಾಚರಣೆ ನಡೆಸುತ್ತಿದೆ. ಇತರೆ ನಗರ /ಜಿಲ್ಲೆಗಳಲ್ಲಿ ಅನಧಿಕೃತವಾಗಿ ಪ್ರವೇಶಿಸುವ ವಿದೇಶಿಯರುಗಳ ಪತ್ತೆಯ ಬಗ್ಗೆ Special Task force ರಚಿಸಿದ್ದು, ಅದು ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು