2:17 PM Friday18 - April 2025
ಬ್ರೇಕಿಂಗ್ ನ್ಯೂಸ್
Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಬಾಲ ಕಾರ್ಮಿಕ ಪದ್ಧತಿ ಇನ್ನೂ ಜೀವಂತ: ನರೇಗಾ ಕಾಮಗಾರಿಯಲ್ಲಿ ಶಾಲಾ ಮಕ್ಕಳ ಬಳಕೆ !!

07/06/2021, 16:13

ಡಿ ಶರಣಗೌಡ ಗೊರೆಬಾಳ್ ಸಿಂಧನೂರು 

info.reporterkarnataka@ gmail.com

ಸರಕಾರಿ ಅಧಿಕಾರಿಗಳು ತಮ್ಮಲ್ಲಿ ಬಾಲ ಕಾರ್ಮಿಕರು ಇಲ್ಲ ಅಂತ ಎಷ್ಟೇ ಹೇಳಿದರೂ ವಿವಿಧ ಕ್ಷೇತ್ರಗಳಲ್ಲಿ ಮಕ್ಕಳನ್ನು ದುಡಿಸುವುದನ್ನು ನಾವು ಕಾಣುತ್ತೇವೆ. ರಾಯಚೂರು ಜಿಲ್ಲೆಯ ಸಿಂಧನೂರು ಬಳಿ ಇಂತಹ ಘಟನೆ ಬೆಳಕಿಗೆ ಬಂದಿದೆ. ಸರಕಾರದ ನರೇಗಾ ಯೋಜನೆಯಡಿ ನಡೆಯುವ ಕಾಮಗಾರಿಗೆ ಶಾಲಾ ಮಕ್ಕಳನ್ನು ಬಳಸಿರುವುದು ಬೆಳಕಿಗೆ ಬಂದಿದೆ.

ಸಿಂಧನೂರು ತಾಲೂಕಿನ ಗೊರೆಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಭೀಮರಾಜ್ ಕ್ಯಾಂಪ್ ನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿದ್ದ ಕೆಲಸದಲ್ಲಿ ಶಾಲಾ ಮಕ್ಕಳು ಪಾಲ್ಗೊಂಡಿದ್ದರು. ಅದು ಕೂಡ ಒಬ್ಬಿಬ್ಬರು ಹುಡುಗರಲ್ಲ, ಬರೋಬ್ಬರಿ 12 ಮಂದಿ ಮಕ್ಕಳನ್ನು ಕೆಲಸಕ್ಕೆ ಬಳಸಲಾಗಿದೆ.

ಶಾಲಾ ಮಕ್ಕಳು ಮಾತ್ರವಲ್ಲದೆ, ಜಾಬ್ ಕಾರ್ಡ್ ಇಲ್ಲದವರು ಹಾಗೂ ಮನೆಯಲ್ಲಿ ಇಲ್ಲದವರನ್ನು ನೆರೇಗಾ ಕೆಲಸದಲ್ಲಿ ಕಾನೂನುಬಾಹಿರವಾಗಿ ತೊಡಗಿಸಲಾಗಿತ್ತು. ಸುಮಾರು 40 ಮಂದಿ ಜಾಬ್ ಕಾರ್ಡ್ ಇಲ್ಲದವರು ಕೆಲಸ ಮಾಡುತ್ತಿದ್ದರು.

ಇದರ ಮಾಹಿತಿ ಪಡೆದ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಿ.ಪ್ರಮೀಳಾ , ಪಿಡಿಒ ವನಜಾಕ್ಷಿ ಅವರು ಕೆಲಸ ಕಲ್ಪಿಸಿದ ಮೇಟಿಗಳನ್ನು ತರಾಟೆಗೆ ತಗೆದು ಕೊಂಡು  ಶಾಲಾ ಮಕ್ಕಳು ಹಾಗೂ ಜಾಬ್ ಕಾರ್ಡ್ ಇಲ್ಲದವರನ್ನು ಮನೆಗೆ ಕಳುಹಿಸುವಲ್ಲಿ ಯಶಸ್ವಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು