6:51 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಬಾಲ ಕಾರ್ಮಿಕ ಪದ್ಧತಿ ಇನ್ನೂ ಜೀವಂತ: ನರೇಗಾ ಕಾಮಗಾರಿಯಲ್ಲಿ ಶಾಲಾ ಮಕ್ಕಳ ಬಳಕೆ !!

07/06/2021, 16:13

ಡಿ ಶರಣಗೌಡ ಗೊರೆಬಾಳ್ ಸಿಂಧನೂರು 

info.reporterkarnataka@ gmail.com

ಸರಕಾರಿ ಅಧಿಕಾರಿಗಳು ತಮ್ಮಲ್ಲಿ ಬಾಲ ಕಾರ್ಮಿಕರು ಇಲ್ಲ ಅಂತ ಎಷ್ಟೇ ಹೇಳಿದರೂ ವಿವಿಧ ಕ್ಷೇತ್ರಗಳಲ್ಲಿ ಮಕ್ಕಳನ್ನು ದುಡಿಸುವುದನ್ನು ನಾವು ಕಾಣುತ್ತೇವೆ. ರಾಯಚೂರು ಜಿಲ್ಲೆಯ ಸಿಂಧನೂರು ಬಳಿ ಇಂತಹ ಘಟನೆ ಬೆಳಕಿಗೆ ಬಂದಿದೆ. ಸರಕಾರದ ನರೇಗಾ ಯೋಜನೆಯಡಿ ನಡೆಯುವ ಕಾಮಗಾರಿಗೆ ಶಾಲಾ ಮಕ್ಕಳನ್ನು ಬಳಸಿರುವುದು ಬೆಳಕಿಗೆ ಬಂದಿದೆ.

ಸಿಂಧನೂರು ತಾಲೂಕಿನ ಗೊರೆಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಭೀಮರಾಜ್ ಕ್ಯಾಂಪ್ ನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿದ್ದ ಕೆಲಸದಲ್ಲಿ ಶಾಲಾ ಮಕ್ಕಳು ಪಾಲ್ಗೊಂಡಿದ್ದರು. ಅದು ಕೂಡ ಒಬ್ಬಿಬ್ಬರು ಹುಡುಗರಲ್ಲ, ಬರೋಬ್ಬರಿ 12 ಮಂದಿ ಮಕ್ಕಳನ್ನು ಕೆಲಸಕ್ಕೆ ಬಳಸಲಾಗಿದೆ.

ಶಾಲಾ ಮಕ್ಕಳು ಮಾತ್ರವಲ್ಲದೆ, ಜಾಬ್ ಕಾರ್ಡ್ ಇಲ್ಲದವರು ಹಾಗೂ ಮನೆಯಲ್ಲಿ ಇಲ್ಲದವರನ್ನು ನೆರೇಗಾ ಕೆಲಸದಲ್ಲಿ ಕಾನೂನುಬಾಹಿರವಾಗಿ ತೊಡಗಿಸಲಾಗಿತ್ತು. ಸುಮಾರು 40 ಮಂದಿ ಜಾಬ್ ಕಾರ್ಡ್ ಇಲ್ಲದವರು ಕೆಲಸ ಮಾಡುತ್ತಿದ್ದರು.

ಇದರ ಮಾಹಿತಿ ಪಡೆದ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಿ.ಪ್ರಮೀಳಾ , ಪಿಡಿಒ ವನಜಾಕ್ಷಿ ಅವರು ಕೆಲಸ ಕಲ್ಪಿಸಿದ ಮೇಟಿಗಳನ್ನು ತರಾಟೆಗೆ ತಗೆದು ಕೊಂಡು  ಶಾಲಾ ಮಕ್ಕಳು ಹಾಗೂ ಜಾಬ್ ಕಾರ್ಡ್ ಇಲ್ಲದವರನ್ನು ಮನೆಗೆ ಕಳುಹಿಸುವಲ್ಲಿ ಯಶಸ್ವಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು