6:09 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಬಾಲ ಕಾರ್ಮಿಕ ಪದ್ಧತಿ ಇನ್ನೂ ಜೀವಂತ: ನರೇಗಾ ಕಾಮಗಾರಿಯಲ್ಲಿ ಶಾಲಾ ಮಕ್ಕಳ ಬಳಕೆ !!

07/06/2021, 16:13

ಡಿ ಶರಣಗೌಡ ಗೊರೆಬಾಳ್ ಸಿಂಧನೂರು 

info.reporterkarnataka@ gmail.com

ಸರಕಾರಿ ಅಧಿಕಾರಿಗಳು ತಮ್ಮಲ್ಲಿ ಬಾಲ ಕಾರ್ಮಿಕರು ಇಲ್ಲ ಅಂತ ಎಷ್ಟೇ ಹೇಳಿದರೂ ವಿವಿಧ ಕ್ಷೇತ್ರಗಳಲ್ಲಿ ಮಕ್ಕಳನ್ನು ದುಡಿಸುವುದನ್ನು ನಾವು ಕಾಣುತ್ತೇವೆ. ರಾಯಚೂರು ಜಿಲ್ಲೆಯ ಸಿಂಧನೂರು ಬಳಿ ಇಂತಹ ಘಟನೆ ಬೆಳಕಿಗೆ ಬಂದಿದೆ. ಸರಕಾರದ ನರೇಗಾ ಯೋಜನೆಯಡಿ ನಡೆಯುವ ಕಾಮಗಾರಿಗೆ ಶಾಲಾ ಮಕ್ಕಳನ್ನು ಬಳಸಿರುವುದು ಬೆಳಕಿಗೆ ಬಂದಿದೆ.

ಸಿಂಧನೂರು ತಾಲೂಕಿನ ಗೊರೆಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಭೀಮರಾಜ್ ಕ್ಯಾಂಪ್ ನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿದ್ದ ಕೆಲಸದಲ್ಲಿ ಶಾಲಾ ಮಕ್ಕಳು ಪಾಲ್ಗೊಂಡಿದ್ದರು. ಅದು ಕೂಡ ಒಬ್ಬಿಬ್ಬರು ಹುಡುಗರಲ್ಲ, ಬರೋಬ್ಬರಿ 12 ಮಂದಿ ಮಕ್ಕಳನ್ನು ಕೆಲಸಕ್ಕೆ ಬಳಸಲಾಗಿದೆ.

ಶಾಲಾ ಮಕ್ಕಳು ಮಾತ್ರವಲ್ಲದೆ, ಜಾಬ್ ಕಾರ್ಡ್ ಇಲ್ಲದವರು ಹಾಗೂ ಮನೆಯಲ್ಲಿ ಇಲ್ಲದವರನ್ನು ನೆರೇಗಾ ಕೆಲಸದಲ್ಲಿ ಕಾನೂನುಬಾಹಿರವಾಗಿ ತೊಡಗಿಸಲಾಗಿತ್ತು. ಸುಮಾರು 40 ಮಂದಿ ಜಾಬ್ ಕಾರ್ಡ್ ಇಲ್ಲದವರು ಕೆಲಸ ಮಾಡುತ್ತಿದ್ದರು.

ಇದರ ಮಾಹಿತಿ ಪಡೆದ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಿ.ಪ್ರಮೀಳಾ , ಪಿಡಿಒ ವನಜಾಕ್ಷಿ ಅವರು ಕೆಲಸ ಕಲ್ಪಿಸಿದ ಮೇಟಿಗಳನ್ನು ತರಾಟೆಗೆ ತಗೆದು ಕೊಂಡು  ಶಾಲಾ ಮಕ್ಕಳು ಹಾಗೂ ಜಾಬ್ ಕಾರ್ಡ್ ಇಲ್ಲದವರನ್ನು ಮನೆಗೆ ಕಳುಹಿಸುವಲ್ಲಿ ಯಶಸ್ವಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು