12:57 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಬಾಲ ಕಾರ್ಮಿಕ ಪದ್ಧತಿ ಇನ್ನೂ ಜೀವಂತ: ನರೇಗಾ ಕಾಮಗಾರಿಯಲ್ಲಿ ಶಾಲಾ ಮಕ್ಕಳ ಬಳಕೆ !!

07/06/2021, 16:13

ಡಿ ಶರಣಗೌಡ ಗೊರೆಬಾಳ್ ಸಿಂಧನೂರು 

info.reporterkarnataka@ gmail.com

ಸರಕಾರಿ ಅಧಿಕಾರಿಗಳು ತಮ್ಮಲ್ಲಿ ಬಾಲ ಕಾರ್ಮಿಕರು ಇಲ್ಲ ಅಂತ ಎಷ್ಟೇ ಹೇಳಿದರೂ ವಿವಿಧ ಕ್ಷೇತ್ರಗಳಲ್ಲಿ ಮಕ್ಕಳನ್ನು ದುಡಿಸುವುದನ್ನು ನಾವು ಕಾಣುತ್ತೇವೆ. ರಾಯಚೂರು ಜಿಲ್ಲೆಯ ಸಿಂಧನೂರು ಬಳಿ ಇಂತಹ ಘಟನೆ ಬೆಳಕಿಗೆ ಬಂದಿದೆ. ಸರಕಾರದ ನರೇಗಾ ಯೋಜನೆಯಡಿ ನಡೆಯುವ ಕಾಮಗಾರಿಗೆ ಶಾಲಾ ಮಕ್ಕಳನ್ನು ಬಳಸಿರುವುದು ಬೆಳಕಿಗೆ ಬಂದಿದೆ.

ಸಿಂಧನೂರು ತಾಲೂಕಿನ ಗೊರೆಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಭೀಮರಾಜ್ ಕ್ಯಾಂಪ್ ನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿದ್ದ ಕೆಲಸದಲ್ಲಿ ಶಾಲಾ ಮಕ್ಕಳು ಪಾಲ್ಗೊಂಡಿದ್ದರು. ಅದು ಕೂಡ ಒಬ್ಬಿಬ್ಬರು ಹುಡುಗರಲ್ಲ, ಬರೋಬ್ಬರಿ 12 ಮಂದಿ ಮಕ್ಕಳನ್ನು ಕೆಲಸಕ್ಕೆ ಬಳಸಲಾಗಿದೆ.

ಶಾಲಾ ಮಕ್ಕಳು ಮಾತ್ರವಲ್ಲದೆ, ಜಾಬ್ ಕಾರ್ಡ್ ಇಲ್ಲದವರು ಹಾಗೂ ಮನೆಯಲ್ಲಿ ಇಲ್ಲದವರನ್ನು ನೆರೇಗಾ ಕೆಲಸದಲ್ಲಿ ಕಾನೂನುಬಾಹಿರವಾಗಿ ತೊಡಗಿಸಲಾಗಿತ್ತು. ಸುಮಾರು 40 ಮಂದಿ ಜಾಬ್ ಕಾರ್ಡ್ ಇಲ್ಲದವರು ಕೆಲಸ ಮಾಡುತ್ತಿದ್ದರು.

ಇದರ ಮಾಹಿತಿ ಪಡೆದ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಿ.ಪ್ರಮೀಳಾ , ಪಿಡಿಒ ವನಜಾಕ್ಷಿ ಅವರು ಕೆಲಸ ಕಲ್ಪಿಸಿದ ಮೇಟಿಗಳನ್ನು ತರಾಟೆಗೆ ತಗೆದು ಕೊಂಡು  ಶಾಲಾ ಮಕ್ಕಳು ಹಾಗೂ ಜಾಬ್ ಕಾರ್ಡ್ ಇಲ್ಲದವರನ್ನು ಮನೆಗೆ ಕಳುಹಿಸುವಲ್ಲಿ ಯಶಸ್ವಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು