4:25 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕ್ರಿಶ್ಚಿಯನ್ ಮಿಷನರಿಗಳ ಕಾರ್ಯ ಶ್ಲಾಘನೀಯ: ಬಳ್ಳಾರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

27/11/2024, 22:54

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸಮಾಜದಲ್ಲಿ ಇಂದಿಗೂ ಜಾತಿ ಬೇಧ ಬೇರೂರಿದೆ. ಇದನ್ನು ಹೋಗಲಾಡಿಸಲು ರಾಜ್ಯದಲ್ಲಿ ಕ್ರಿಶ್ಚಿಯನ್ ಮಿಷನರಿಗಳು ಗುಣ ಮಟ್ಟದ ಶಿಕ್ಷಣ ನೀಡಿರುವ ಕಾರ್ಯ ಶ್ಲಾಘನೀಯ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಬುಧವಾರ ಸಂಜೆ ಬಳ್ಳಾರಿಯಲ್ಲಿ ಬಳ್ಳಾರಿ ಕ್ರೈಸ್ತ ಧರ್ಮ‌ಪ್ರಾಂತದ ಅಮೃತ ಮಹೋತ್ಸವದ ಎರಡು ದಿನಗಳ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಿದ್ದರು.
ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಸಮುದಾಯಕ್ಕೆ ಅಕ್ಷರ ಕಲಿಸುವುದು ಮುಖ್ಯ.


ಭಾರತ ಬಹುತ್ವದ ದೇಶ, ಇಲ್ಲಿ ಎಲ್ಲಾ ಧರ್ಮ, ಜಾತಿ, ಭಾಷಿಕರು ಇದ್ದಾರೆ. ನಾವೆಲ್ಲರು ಮೂಲತಃ ಮಾನವರು, ಅದಕ್ಕೆ ಸರ್ವ ಧರ್ಮ ಸಮನ್ವಯ ಈ ದೇಶದಲ್ಲಿ ನೋಡಲು ಸಾಧ್ಯ. ಈ ಪರಂಪರೆಯನ್ನು ಉಳಿಸಿ, ಬೆಳಸಿಕೊಂಡು ಹೋಗುವುದು ನಮ್ಮ ಕರ್ತವ್ಯವಾಗಬೇಕು. ನಾವು ವಿಶ್ವ ಮಾನವರಾಗಬೇಕೆ ಹೊರತು ಅಲ್ಪ‌ಮಾನವರಾಗಬಾರದು. ದ್ವೇಷ ಅಸೂಯೆ ನಮ್ಮ ಮಧ್ಯ ಇರಬಾರದು. ಅದು ಇದ್ದರೆ ಸಮಾಜದ ಒಡಕು ಆಗುತ್ತದೆ ಎಂದರು.
ಬೇರೆ ಧರ್ಮದ ಬಗ್ಗೆ ಸಹಿಷ್ಣತೆಯನ್ನು ಬೆಳಸಿಕೊಳ್ಳಬೇಕು ಎಂಬುದನ್ನು ಸಂವಿಧಾನ ಹೇಳಿದೆ. ಅದನ್ನು ನಾವು ಪಾಲಿಸಬೇಕು. ನಾನು ಮುಸ್ಲೀಂರನ್ನು ಓಲೈಸುತ್ತೇನೆಂದು ಹೇಳುತ್ತಾರೆ, ಹಿಂದುಗಳಂತೆ ಎಲ್ಲರನ್ನೂ ಪ್ರೀತಿಸುತ್ತೇನೆ ಎಂದರು.
ಜಾತೀಯತೆಯಿಂದ ಅಸಮಾನತೆ ಸೃಷ್ಟಿಯಾಗಿ ಸಮಾಜದಲ್ಲಿ ಇನ್ನೂ ಅಸಮಾಧಾನ ಇದೆ. ರಾಜಕೀಯ ಪ್ರಜಾಪ್ರಭುತ್ವ ಸಿಕ್ಕಿದೆ. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಇಲ್ಲ. ಅಸಮಾನತೆ ಹೋಗಬೇಕೆಂದರೆ ಶಿಕ್ಷಣ ಬೇಕು. ಮೀಸಲಾತಿ ಬೇಕು. ಅಸಮಾನತೆ ಹೋಗಲಾಡಿಸಲು ಪಂಚ ಗ್ಯಾರಂಟಿ ಯೋಜನೆ ಜಾರಿಗೆ ತಂದೆ ಎಂದರು.
ಏಸು, ಕನಕದಾಸ, ಪೈಗಂಬರ್ ಮೊದಲಾದ ದಾರ್ಶನಿಕರು ಸಮಾನತೆಯನ್ನು ಬೋಧಿಸಿದರು. ಆದರೂ ಅಸಮಾನತೆ ಹೋಗಲಿಲ್ಲ. ಶಿಕ್ಷಣದಿಂದ ಮಾತ್ರ ಅಸಮಾನತೆ ಹೋಗಲಾಡಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಧರ್ಮ ಜಾತಿ ಆಧಾರದಲ್ಲಿ ಸಮಾಜವನ್ನು ಒಡೆಯುವ ಕಾರ್ಯ ನಡೆಯುತ್ತದೆ. ಅಂಥವರ ವಿರುದ್ದ ಎಚ್ಚರಿಕೆಯಿಂದ ಇರಬೇಕು. ಜಾತ್ಯತೀತಯನ್ನು ಸಂವಿಧಾನದಿಂದ ತೆಗೆಯುವ ಕೆಲಸ ಆಗಬಾರದು. ಸಂವಿಧಾನಕ್ಕೆ ವಿರುದ್ದವಾದವರು ಈ ಕೆಲಸ ಮಾಡುತ್ತಾರೆ. ಸಂವಿಧಾನದ ಬಗ್ಗೆ ಎಲ್ಲರೂ ತಿಳಿಯಬೇಕು. ಅದರ ರೀತಿಯಲ್ಲಿಯೇ ಎಲ್ಲಾ ಪಕ್ಷಗಳು ನಡೆಯಬೇಕು. ಅದರ ಆಶಯವನ್ನು ಜಾರಿ‌ಮಾಡಬೇಕು ಎಂದು ಮುಖ್ಯಮಂತ್ರಿ ನುಡಿದರು.
ಈ ವೇಳೆ ಬಳ್ಳಾರಿ ಧರ್ಮ ಪ್ರಾಂತ್ಯದಿಂದ ಬಡ ಜನತೆ ನಿರ್ಮಿಸಿದ ಮನೆ, ಕೊಡಲು ಉದ್ದೇಶಿಸಿರುವ ನಿವೇಶನಗಳ ಹಂಚಿಕೆಯನ್ನು, ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಮುಖ್ಯಮಂತ್ರಿಗಳು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದರು.
ಸಮಾರಂಭದಲ್ಲಿ ಬಿಷಪ್ ಹೆನ್ರಿಕ್ ಡಿಸೋಜ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಸ್ಥಳೀಯ ಕೊಟ್ಟೂರು ಸ್ವಾಮಿ ಮಠದ ಬಸವಲಿಂಗಸ್ವಾಮಿ, ಕಲ್ಯಾಣ ಮಠದ ಕಲ್ಯಾಣ ಸ್ವಾಮಿ,ಕೆ.ಜೆ.ಜಾರ್ಜ್, ಅಲ್ಲಂ ವೀರಭದ್ರಪ್ಪ, ಶಾಸಕರಾದ ಡಾ.ಅಜಯ್ ಸಿಂಗ್, ನಾರಾ ಭಾರತ್ ರೆಡ್ಡಿ , ನಾಗೇಂದ್ರ , ಗಣೇಶ್, ಅನ್ನಪೂರ್ಣ, ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು