11:32 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

27/04/2023, 23:07

ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ನಗರದ ಹೊರವಲಯದ ವಳಚಿಲ್ ನ ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ನಲ್ಲಿ ಗುರುವಾರ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಈಗಾಗಲೇ 4 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. 5ನೇ ಯೋಜನೆಯು ಮಹಿಳೆಯರಿಗೆ ಉಚಿತ ಪ್ರಯಾಣದ್ದಾಗಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಮೊದಲ ಸಂಪುಟ ಸಭೆಯಲ್ಲೇ ಈ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಅವರು ನುಡಿದರು.
ರಾಜ್ಯದಲ್ಲಿರುವ ಬಿಜೆಪಿ ಸರಕಾರವನ್ನು ನಾವು ಆಯ್ಕೆ ಮಾಡಿಲ್ಲ. ಓಟಿನಿಂದ ಈ ಸರಕಾರ ಅಸ್ತಿತ್ವಕ್ಕೆ ನಾವು ಬಂದಿಲ್ಲ. ಬಿಜೆಪಿ ಕಳ್ಳತನದಿಂದ ಮಾಡಿದ ಸರಕಾರ ಇದಾಗಿದೆ. ಪ್ರಜಾಪ್ರಭುತ್ವವನ್ನು ಧ್ವಂಸ ಮಾಡಿದ್ದಾರೆ. ಕಳ್ಳತನ ಇವರ ಅಭ್ಯಾಸ. ಕರ್ನಾಟಕವನ್ನು ಮೋದಿಯ ಕೈಗೆ ಕೊಡುವ ಪ್ರಯತ್ನ ನಡೆಯುತ್ತಿದೆ. 40% ಕಮಿಷನ್ ಸರಕಾರ ನಮಗೆ ಬೇಕಾ? ಎಂದು ಅವರು ಪ್ರಶ್ನಿಸಿದರು.
ದೇಶದಲ್ಲಿ ಕಪ್ಪು ಹಣ ಜಾಸ್ತಿಯಾಗಿದೆ.ಕಪ್ಪು ಹಣದ ಬಗ್ಗೆ ಮಾತನಾಡಿದಕ್ಕೆ ನನ್ಬನ್ನು ಸಂಸತ್ ನಿಂದ ಹೊರಗೆ ಹಾಕಲಾಯಿತು. ಅದಾನಿ ಮತ್ತು ಪ್ರಧಾನಿ ನಡುವಿನ ಸಂಬಂಧ ಏನು? ವಿದೇಶದಲ್ಲಿರುವ ನಕಲಿ ಕಂಪನಿಗಳ ಹಣ ಯಾರದ್ದು? ಇದನ್ನೆಲ್ಲ ಪ್ರಶ್ನಿಸಿದಕ್ಕೆ ನನ್ನನ್ನು ಪಾರ್ಲಿಮೆಂಟ್ ನಿಂದ ಹೊರ ಹಾಕಲಾಯಿತು. ಬಿಜೆಪಿ ಕೊಟ್ಟ ಯಾವುದೇ ಭರವಸೆಯನ್ನು ಈಡೇರಿಸಿಲ್ಲ. ಆದರೆ ಅದಾನಿಗೆ ಕೊಟ್ಟ ಭರವಸೆ ಯನ್ನು ಈಡೇರಿಸಿದೆ ಎಂದು ಅವರು ಟೀಕಿಸಿದರು.


ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ, ಮಾಜಿ ಸಚಿವ ಬಿ. ರಮಾನಾಥ ರೈ, ಅಭಯಚಂದ್ರ ಜೈನ್. ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ, ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು