11:09 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 3 ಹಂತಗಳಲ್ಲಿ ಅನ್ ಲಾಕ್ ?: 2ನೇ ಹಂತದಲ್ಲಿ ಬಸ್ , ಕ್ಯಾಬ್, ಆಟೋ ಸಂಚಾರಕ್ಕೆ ಅವಕಾಶ ?

07/06/2021, 09:19

ಬೆಂಗಳೂರು(reporterkarnataka news): ರಾಜ್ಯ ಜೂನ್ 14ಕ್ಕೆ ಮುನ್ನವೇ ಅನ್ ಲಾಕ್ ಆಗುವ ಎಲ್ಲ ಸಾಧ್ಯತೆಗಳಿದ್ದು, ಹಂತ ಹಂತವಾಗಿ ಈ ಪ್ರಕ್ರಿಯೆ ನಡೆಯಲಿದೆ. ಹಾಗಾದರೆ ಯಾವ ರೀತಿಯಲ್ಲಿ ಅನ್ ಲಾಕ್ ಪ್ರಕ್ರಿಯೆ ನಡೆಯಲಿದೆ ಎಂಬುವುದನ್ನು ನೋಡೋಣ.

ಮೊದಲ ಹಂತದಲ್ಲಿ ದಿನಸಿ ಅಂಗಡಿ, ಕೈಗಾರಿಕೆಗಳು, ಗಾರ್ಮೆಂಟ್ಸ್, ಫ್ಯಾಕ್ಟರಿಗಳನ್ನು ತೆರೆಯಲು ಅವಕಾಶ ನೀಡಲಾಗುತ್ತದೆ. ಎರಡನೇ ಹಂತದಲ್ಲಿ ಹೋಟೆಲ್, ಆಟೋ, ಕ್ಯಾಬ್,  ಶೇ.50ರಷ್ಟು ಪ್ರಯಾಣಿಕರೊಂದಿಗೆ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಗಲಿದೆ. ಮೂರನೇ ಹಂತದಲ್ಲಿ ಬಾರ್ ರೆಸ್ಟೋರೆಂಟ್, ಕ್ಲಬ್‍ಗೆ ಶೇ.50ರಷ್ಟು ಸೀಟುನೊಂದಿಗೆ ಶುರು ಮಾಡಲು ಅವಕಾಶ ದೊರಕಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಲ್ಲಿ ಶೇ.3, ರಾಜ್ಯದಲ್ಲಿ ಶೇ.6ಕ್ಕೆ ಪಾಸಿಟಿವಿಟಿ ಇಳಿದರೆ ಅನ್‍ಲಾಕ್ ಆಗಲಿದೆ. ಸದ್ಯ ಬೆಂಗಳೂರಿನಲ್ಲಿ ಶೇ.4.96, ಕೆಲ ಜಿಲ್ಲೆಗಳಲ್ಲಿ ಶೇ.39ರಷ್ಟು ಪಾಸಿಟಿವಿಟಿ ರೇಟ್ ಇದೆ. ಕೆಲವೇ ದಿನಗಳಲ್ಲಿ ಪಾಸಿಟಿವಿಟಿ ರೇಟ್ ಮತ್ತಷ್ಟು ಇಳಿಯುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು