12:48 PM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ, ಲೋಡ್ ​ಶೆಡ್ಡಿಂಗ್ ಆಗೊಲ್ಲ: ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ

21/04/2022, 09:33

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಆಗಲ್ಲ, ಕಲ್ಲಿದ್ದಲು ಕೊರತೆ ಇಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಕಲ್ಲಿದ್ದಲು ಸರಬರಾಜು ಕೊರತೆ ಇದೆ ಅನ್ನುವ ಊಹಾಪೋಹದ ಮಾತು ಕಾಂಗ್ರೆಸ್ ಹೇಳ್ತಾ ಇದೆ. ಇದರಿಂದ ಲೋಡ್ ಶೆಡ್ಡಿಂಗ್ ಆಗುತ್ತೆ ಅಂತಾ ಸುಳ್ಳು ಸುದ್ದಿ ಹಬ್ಬಿಸ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಆಗಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮಾರ್ಚ್ 21 ರಂದು 14,000 ಮೆಗಾವ್ಯಾಟ್ ಪೀಕ್ ಲೋಡ್ ಕಂಡು ಬಂತು. ಅಷ್ಟು ಬಂದ್ರೂ ಲೋಡ್ ಶೆಡ್ಡಿಂಗ್ ಮಾಡಲಿಲ್ಲ. 10,400 ಮೆಗಾವ್ಯಾಟ್ ಲೋಡ್ ಶೆಡ್ಡಿಂಗ್ ಬಂದಿದೆ. ನಮ್ಮ‌ಬೇಡಿಕೆಯೂ ಕಡಿಮೆಯಾಗ್ತಿದೆ. 12 ಸಾವಿರ ಮೆಗಾವ್ಯಾಟ್ ಗೆ ಇಳಿದಿದೆ. ರಾಯಚೂರು ಮತ್ತು ಬಳ್ಳಾರಿ ಉಷ್ಣ ವಿದ್ಯುತ್​ ಘಟಕಗಳನ್ನು ಬಂದ್ ಮಾಡಿಲ್ಲ. ಅದೆಲ್ಲವೂ ಸುಳ್ಳು ಸುದ್ದಿ ಹರಿದಾಡ್ತಿವೆ. ಎರಡ್ಮೂರು ಯೂನಿಟ್ ಬಂದ್ ಮಾಡಿದ್ದು ಕೊರತೆಯಿಂದಲ್ಲ. ಆರು ತಿಂಗಳ ಮೊದಲೇ ನಾವು ಎಚ್ಚರಿಕೆ ತೆಗೆದುಕೊಂಡಿದ್ವಿ, ಲೋಡ್ ಶೆಡ್ಡಿಂಗ್ ಕೊರತೆ ಇಲ್ಲಿಯವರೆಗೆ ಉದ್ಬವವಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಯಚೂರು ಸೇರಿ ಒಂದಿಷ್ಟು ಕಡೆ ಮಳೆಯಿಂದಾಗಿ ಕಲ್ಲಿದ್ದಲು ಕೊರತೆ ಉಂಟಾಗಿದೆ. ಆರು ತಿಂಗಳ ಮೊದಲೇ ಎಚ್ಚರಿಕೆ ತೆಗೆದುಕೊಂಡಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಗದರ್ಶನದಲ್ಲಿ ಎಲ್ಲಾ ವ್ಯವಸ್ಥಿತವಾಗಿ ನೋಡಿಕೊಂಡು ಬಂದಿದ್ದೇವೆ. ಸೋಲಾರ್ ಮತ್ತು ವಿಂಡ್ ಹೆಚ್ಚು ಉತ್ಪಾದನೆ ಆಗ್ತಾ ಇದೆ. ಹಾಗಾಗಿ ಲೋಡ್ ಶೆಡ್ಡಿಂಗ್ ತೊಂದರೆ ಆಗಿಲ್ಲ. ಕಲ್ಲಿದ್ದಲು ಸರಬರಾಜು ಕೊರತೆಯಿಂದ ತೊಂದರೆ ಆಗಿರಬಹುದು. ಮುಂದೆ ಸರಿ ಮಾಡುವ ಕೆಲಸ ಮಾಡಿದ್ದೇವೆ. ಅನಗತ್ಯವಾಗಿ ಕಾಂಗ್ರೆಸ್ ನವರು ಈ ರೀತಿ ಮಾತಾಡುತ್ತಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಇಂತಹದ್ದು ಏನೂ ಆಗಲ್ಲ ಎಂದು ಸಚಿವ ಸುನಿಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು