5:20 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ, ಲೋಡ್ ​ಶೆಡ್ಡಿಂಗ್ ಆಗೊಲ್ಲ: ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ

21/04/2022, 09:33

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಆಗಲ್ಲ, ಕಲ್ಲಿದ್ದಲು ಕೊರತೆ ಇಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಕಲ್ಲಿದ್ದಲು ಸರಬರಾಜು ಕೊರತೆ ಇದೆ ಅನ್ನುವ ಊಹಾಪೋಹದ ಮಾತು ಕಾಂಗ್ರೆಸ್ ಹೇಳ್ತಾ ಇದೆ. ಇದರಿಂದ ಲೋಡ್ ಶೆಡ್ಡಿಂಗ್ ಆಗುತ್ತೆ ಅಂತಾ ಸುಳ್ಳು ಸುದ್ದಿ ಹಬ್ಬಿಸ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಆಗಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮಾರ್ಚ್ 21 ರಂದು 14,000 ಮೆಗಾವ್ಯಾಟ್ ಪೀಕ್ ಲೋಡ್ ಕಂಡು ಬಂತು. ಅಷ್ಟು ಬಂದ್ರೂ ಲೋಡ್ ಶೆಡ್ಡಿಂಗ್ ಮಾಡಲಿಲ್ಲ. 10,400 ಮೆಗಾವ್ಯಾಟ್ ಲೋಡ್ ಶೆಡ್ಡಿಂಗ್ ಬಂದಿದೆ. ನಮ್ಮ‌ಬೇಡಿಕೆಯೂ ಕಡಿಮೆಯಾಗ್ತಿದೆ. 12 ಸಾವಿರ ಮೆಗಾವ್ಯಾಟ್ ಗೆ ಇಳಿದಿದೆ. ರಾಯಚೂರು ಮತ್ತು ಬಳ್ಳಾರಿ ಉಷ್ಣ ವಿದ್ಯುತ್​ ಘಟಕಗಳನ್ನು ಬಂದ್ ಮಾಡಿಲ್ಲ. ಅದೆಲ್ಲವೂ ಸುಳ್ಳು ಸುದ್ದಿ ಹರಿದಾಡ್ತಿವೆ. ಎರಡ್ಮೂರು ಯೂನಿಟ್ ಬಂದ್ ಮಾಡಿದ್ದು ಕೊರತೆಯಿಂದಲ್ಲ. ಆರು ತಿಂಗಳ ಮೊದಲೇ ನಾವು ಎಚ್ಚರಿಕೆ ತೆಗೆದುಕೊಂಡಿದ್ವಿ, ಲೋಡ್ ಶೆಡ್ಡಿಂಗ್ ಕೊರತೆ ಇಲ್ಲಿಯವರೆಗೆ ಉದ್ಬವವಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಯಚೂರು ಸೇರಿ ಒಂದಿಷ್ಟು ಕಡೆ ಮಳೆಯಿಂದಾಗಿ ಕಲ್ಲಿದ್ದಲು ಕೊರತೆ ಉಂಟಾಗಿದೆ. ಆರು ತಿಂಗಳ ಮೊದಲೇ ಎಚ್ಚರಿಕೆ ತೆಗೆದುಕೊಂಡಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಗದರ್ಶನದಲ್ಲಿ ಎಲ್ಲಾ ವ್ಯವಸ್ಥಿತವಾಗಿ ನೋಡಿಕೊಂಡು ಬಂದಿದ್ದೇವೆ. ಸೋಲಾರ್ ಮತ್ತು ವಿಂಡ್ ಹೆಚ್ಚು ಉತ್ಪಾದನೆ ಆಗ್ತಾ ಇದೆ. ಹಾಗಾಗಿ ಲೋಡ್ ಶೆಡ್ಡಿಂಗ್ ತೊಂದರೆ ಆಗಿಲ್ಲ. ಕಲ್ಲಿದ್ದಲು ಸರಬರಾಜು ಕೊರತೆಯಿಂದ ತೊಂದರೆ ಆಗಿರಬಹುದು. ಮುಂದೆ ಸರಿ ಮಾಡುವ ಕೆಲಸ ಮಾಡಿದ್ದೇವೆ. ಅನಗತ್ಯವಾಗಿ ಕಾಂಗ್ರೆಸ್ ನವರು ಈ ರೀತಿ ಮಾತಾಡುತ್ತಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಇಂತಹದ್ದು ಏನೂ ಆಗಲ್ಲ ಎಂದು ಸಚಿವ ಸುನಿಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು