11:51 PM Thursday26 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್

14/01/2022, 21:23

ಬೆಂಗಳೂರು(reporterkarnataka.com): ಕೋವಿಡ್ ನಿಯಂತ್ರಣಕ್ಕೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ.

ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುತ್ತೇವೆ ವಿನಹ ಲಾಕ್ ಡೌನ್ ಖಂಡಿತ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ಈಗಾಗಲೇ ಎರಡು ಬಾರಿ ಲಾಕ್ಡೌನ್ ನಿಂದ ಸಾಕಷ್ಟು ಆರ್ಥಿಕ ಸಮಸ್ಯೆ ಜನರಿಗೆ ಉಂಟಾಗಿರುವ ಅರಿವು ಸರಕಾರಕ್ಕೆ ಇದೆ.

ಹೀಗಾಗಿ ಲಾಕ್ಡೌನ್ ಉದ್ದೇಶ ಸರಕಾರದ ಮುಂದಿಲ್ಲ.ಫೆಬ್ರವರಿ ಅಂತ್ಯದ ವೇಳೆಗೆ ಕೋವಿಡ್ ಸಂಖ್ಯೆ ಇಳಿಮುಖ ಆಗುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಹೀಗಾಗಿ ಜನರು ಒಂದೂವರೆ ತಿಂಗಳ ಕಾಲ ಅತ್ಯಂತ ಎಚ್ಚರಿಕೆಯಲ್ಲಿ ಇರಬೇಕೆಂದು ಸಚಿವರು ಮನವಿ ಮಾಡಿದರು.

ಫೆಬ್ರವರಿ ಮೊದಲ ವಾರದಲ್ಲಿ ಅತ್ಯಧಿಕ  ಕೋವಿಡ್ ಸಂಖ್ಯೆಗಳ ನಿರೀಕ್ಷೆ ಇದೆ. ಮೂರು ಮತ್ತು ನಾಲ್ಕನೇ ವಾರದಲ್ಲಿ ಇದು ಕಡಿಮೆಯಾಗುತ್ತಾ ಹೋಗುತ್ತದೆ.

ತಜ್ಞರು ಅಭಿಪ್ರಾಯ ನೀಡಿದ್ದಾರೆ. ಹೀಗಾಗಿ ಸರಕಾರ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತದೆ.

ಆತಂಕಕಾರಿ ಮತ್ತು ಜನರಿಗೆ ಸಮಸ್ಯೆ ಉಂಟು ಮಾಡುವ ನಿಯಮ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವರು ನುಡಿದರು

ಇತ್ತೀಚಿನ ಸುದ್ದಿ

ಜಾಹೀರಾತು