4:49 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್

14/01/2022, 21:23

ಬೆಂಗಳೂರು(reporterkarnataka.com): ಕೋವಿಡ್ ನಿಯಂತ್ರಣಕ್ಕೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ.

ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುತ್ತೇವೆ ವಿನಹ ಲಾಕ್ ಡೌನ್ ಖಂಡಿತ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ಈಗಾಗಲೇ ಎರಡು ಬಾರಿ ಲಾಕ್ಡೌನ್ ನಿಂದ ಸಾಕಷ್ಟು ಆರ್ಥಿಕ ಸಮಸ್ಯೆ ಜನರಿಗೆ ಉಂಟಾಗಿರುವ ಅರಿವು ಸರಕಾರಕ್ಕೆ ಇದೆ.

ಹೀಗಾಗಿ ಲಾಕ್ಡೌನ್ ಉದ್ದೇಶ ಸರಕಾರದ ಮುಂದಿಲ್ಲ.ಫೆಬ್ರವರಿ ಅಂತ್ಯದ ವೇಳೆಗೆ ಕೋವಿಡ್ ಸಂಖ್ಯೆ ಇಳಿಮುಖ ಆಗುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಹೀಗಾಗಿ ಜನರು ಒಂದೂವರೆ ತಿಂಗಳ ಕಾಲ ಅತ್ಯಂತ ಎಚ್ಚರಿಕೆಯಲ್ಲಿ ಇರಬೇಕೆಂದು ಸಚಿವರು ಮನವಿ ಮಾಡಿದರು.

ಫೆಬ್ರವರಿ ಮೊದಲ ವಾರದಲ್ಲಿ ಅತ್ಯಧಿಕ  ಕೋವಿಡ್ ಸಂಖ್ಯೆಗಳ ನಿರೀಕ್ಷೆ ಇದೆ. ಮೂರು ಮತ್ತು ನಾಲ್ಕನೇ ವಾರದಲ್ಲಿ ಇದು ಕಡಿಮೆಯಾಗುತ್ತಾ ಹೋಗುತ್ತದೆ.

ತಜ್ಞರು ಅಭಿಪ್ರಾಯ ನೀಡಿದ್ದಾರೆ. ಹೀಗಾಗಿ ಸರಕಾರ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತದೆ.

ಆತಂಕಕಾರಿ ಮತ್ತು ಜನರಿಗೆ ಸಮಸ್ಯೆ ಉಂಟು ಮಾಡುವ ನಿಯಮ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವರು ನುಡಿದರು

ಇತ್ತೀಚಿನ ಸುದ್ದಿ

ಜಾಹೀರಾತು