4:52 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ: ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ನಿರ್ಧಾರ

25/04/2022, 22:48

ಬೆಂಗಳೂರು(reporterkarnataka.com);ಕೋವಿಡ್ 4ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಮಾಸ್ಕ್ ಧಾರಣೆ ಕಡ್ಡಾಯಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆಯಲ್ಲಿ ನಿರ್ಧರಿಸಲಾಯಿತು.

ದೇಶದಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಸಭೆಯ ಬಳಿಕ ಸುದ್ದಿಗಾರರನ್ನುದ್ದೇಶಿಸಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮಾತನಾಡಿದರು. 

ರಾಜ್ಯಾದ್ಯಂತ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.ಸದ್ಯ ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸುವ ಬಗ್ಗೆ ಚಿಂತನೆ ನಡೆಸಿಲ್ಲ. ಈ ಸಂಬಂಧ ಮಾರ್ಗಸೂಚಿ ಹೊರಡಿಸುತ್ತೇವೆ. ಸುರಕ್ಷಿತ ಅಂತರ ಕಾಯ್ದುಕೊಳ್ಳುವ ಬಗ್ಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಲಸಿಕೆ ಅಭಿಯಾನಕ್ಕೆ ಹೆಚ್ಚು ಒತ್ತು ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಇದುವರೆಗೆ ಲಸಿಕೆ ಪಡೆಯದೇ ಇರುವವರಿಗೆ ಹೆಚ್ಚು ಸಮಸ್ಯೆ ಆಗುತ್ತಿದೆ. ಆದ್ದರಿಂದ 4ನೇ ಅಲೆಯವರೆಗೆ ಕಾಯಬೇಡಿ. ಪ್ರತಿಯೊಬ್ಬರು ಲಸಿಕೆ ಪಡೆಯಬೇಕು. ಎರಡೂ ಡೋಸ್ ಪಡೆದವರು ಬೂಸ್ಟರ್ ಡೋಸ್ ಪಡೆಯಲು ಮುಂದಾಗಬೇಕುಎಂದು ಸಚಿವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು