5:52 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ: ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ನಿರ್ಧಾರ

25/04/2022, 22:48

ಬೆಂಗಳೂರು(reporterkarnataka.com);ಕೋವಿಡ್ 4ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಮಾಸ್ಕ್ ಧಾರಣೆ ಕಡ್ಡಾಯಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆಯಲ್ಲಿ ನಿರ್ಧರಿಸಲಾಯಿತು.

ದೇಶದಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಸಭೆಯ ಬಳಿಕ ಸುದ್ದಿಗಾರರನ್ನುದ್ದೇಶಿಸಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮಾತನಾಡಿದರು. 

ರಾಜ್ಯಾದ್ಯಂತ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.ಸದ್ಯ ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸುವ ಬಗ್ಗೆ ಚಿಂತನೆ ನಡೆಸಿಲ್ಲ. ಈ ಸಂಬಂಧ ಮಾರ್ಗಸೂಚಿ ಹೊರಡಿಸುತ್ತೇವೆ. ಸುರಕ್ಷಿತ ಅಂತರ ಕಾಯ್ದುಕೊಳ್ಳುವ ಬಗ್ಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಲಸಿಕೆ ಅಭಿಯಾನಕ್ಕೆ ಹೆಚ್ಚು ಒತ್ತು ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಇದುವರೆಗೆ ಲಸಿಕೆ ಪಡೆಯದೇ ಇರುವವರಿಗೆ ಹೆಚ್ಚು ಸಮಸ್ಯೆ ಆಗುತ್ತಿದೆ. ಆದ್ದರಿಂದ 4ನೇ ಅಲೆಯವರೆಗೆ ಕಾಯಬೇಡಿ. ಪ್ರತಿಯೊಬ್ಬರು ಲಸಿಕೆ ಪಡೆಯಬೇಕು. ಎರಡೂ ಡೋಸ್ ಪಡೆದವರು ಬೂಸ್ಟರ್ ಡೋಸ್ ಪಡೆಯಲು ಮುಂದಾಗಬೇಕುಎಂದು ಸಚಿವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು