7:44 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ?: 6 ತಿಂಗಳಲ್ಲೇ ಸಿಎಂ ಬೊಮ್ಮಾಯಿ ಅಧಿಕಾರ ಕಳೆದುಕೊಳ್ಳುವರೇ?

20/12/2021, 15:16

ಬೆಂಗಳೂರು(reporterkarnataka.com):

ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಷಯ ಮುನ್ನಲೆಗೆ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಇದಕ್ಕೆ ಪುಷ್ಟಿ ನೀಡುವಂತೆ ಅಧಿಕಾರ ಶಾಶ್ವತವಲ್ಲ ಎನ್ನುವ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರವಾದ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಭಾನುವಾರ ಲಿಂಗಾಯತ ಪಂಚಮಸಾಲಿ ಸಮುದಾಯ ಭವನದ ಕಾಮಗಾರಿಗೆ ಅಡಿಗಲ್ಲು ಮತ್ತು ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ತೀವ್ರ ಭಾವಜೀವಿಯಾದ ಸಿಎಂ ಅವರುಅಧಿಕಾರದ ಎಲ್ಲಾ ಸ್ಥಾನಗಳು ತಾತ್ಕಾಲಿಕ, ಯಾವುದು ಶಾಶ್ವತವಲ್ಲ.ಈ ಜೀವನ ಶಾಶ್ವತವಲ್ಲ, ನಾವು ಎಷ್ಟು ದಿನ ಬದುಕುತ್ತೇವೆ ಎಂಬುದು ನಮಗೆ ತಿಳಿದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅಧಿಕಾರದ ಎಲ್ಲಾ ಹುದ್ದೆಗಳೂ ಶಾಶ್ವತವಲ್ಲ. ಈ ಬಗ್ಗೆ ನಾವು ನಿರಂತರವಾಗಿ ಜಾಗೃತರಾಗಿರಬೇಕು ಎಂದು ಹೇಳಿದರು.

ಕ್ಷೇತ್ರದ ಹೊರಗಡೆ ಮಾತ್ರ ನಾನು ಸಿಎಂ, ಇಲ್ಲಿ ಬಂದಾಗ ಕೇವಲ ಬಸವರಾಜ ಬೊಮ್ಮಾಯಿ. 

ನಿಮ್ಮೆಲ್ಲರ ಆಶೀರ್ವಾದ ಮತ್ತು ಸಹಕಾರದಿಂದಲೇ ನಾನು ರಾಜ್ಯದ ಸಿಎಂ ಆಗಿದ್ದೇನೆ. ನಾನು ಯಾವಾಗಲೂ ಹೇಳುವ ಒಂದು ವಿಷಯವೆಂದರೆ, ನಾನು ಈ ಕ್ಷೇತ್ರದಿಂದ ಹೊರಗಿರುವಾಗ ನಾನು ಗೃಹ ಸಚಿವ, ಜಲಸಂಪನ್ಮೂಲ ಸಚಿವನಾಗಿರಬಹುದು. ಆದರೆ, ನಾನು ಇಲ್ಲಿಗೆ ಹಿಂತಿರುಗಿದಾಗಲೆಲ್ಲಾ ನಾನು ಬಸವರಾಜ ಬೊಮ್ಮಾಯಿ ಮಾತ್ರ ಎಂದರು.

“ನಿಮ್ಮ ಮನೆಗೆ ಬಂದಾಗ ನೀವು ನನಗೆ ರೊಟ್ಟಿ ತಿನ್ನಿಸಿದ್ದೀರಿ, ಅದನ್ನು ಎಂದಿಗೂ ಮರೆಯುವುದಿಲ್ಲ. ನಾನು ಯಾವುದೇ ಕೆಲಸ ಮಾಡಿದರೂ ನಿಮಗೆ ಸದಾ ಋಣಿಯಾಗಿರುತ್ತೇನೆ. ನನಗೆ ಯಾವುದೇ ದೊಡ್ಡ ಆಸೆಗಳಿಲ್ಲ. ಆದರೆ ನನ್ನ ಕ್ಷೇತ್ರದ ಜನರ ಪ್ರೀತಿಗೆ ಸದಾ ಪಾತ್ರನಾಗಬೇಕು ಎಂದು ಬಯಸುತ್ತೇನೆ” ಎಂದು ಸಿಎಂ ಹೇಳಿದ್ದಾರೆ.

ಕಾಂಗ್ರೆಸ್ ಹಾಗೂ ಜನತಾದಳ ಸರಕಾರ ಪತನಗೊಂಡ ಬಳಿಕ ಯಡಿಯೂರಪ್ಪ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂತು. ನಂತರ ಹೈಕಮಾಂಡ್ ಸೂಚನೆ ಮೇರೆಗೆ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಸವರಾಜ ಬೊಮ್ಮಾಯಿ ಈ ವರ್ಷದ ಜುಲೈನಲ್ಲಿ ಅಧಿಕಾರ ಸ್ವೀಕರಿಸಿದ್ದರು. ಇನ್ನು ಸುಮಾರು 16 ತಿಂಗಳಲ್ಲಿ ಪ್ರಸಕ್ತ ವಿಧಾನಸಭೆಯ ಅವಧಿ ಮುಗಿದು ಚುನಾವಣೆ ನಡೆಯಲಿದೆ. ಅಷ್ಟರಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯಾಗಲಿದೆ ಎನ್ನಲಾಗಿದೆ. ಈ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷರೂ ಬದಲಾಗಲಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು