12:15 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಗೆ 20 ಅಂಶಗಳ ಸೂತ್ರ: ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸಭೆ ನಡೆಸಲು ಸೂಚನೆ

12/02/2022, 08:25

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಾಯಿತು.

ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ ಗೋಯಲ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಉಪಸ್ಥಿತರಿದ್ದರು.

ವೀಡಿಯೋ ಸಂವಾದದ ಮುಖ್ಯಾಂಶಗಳು:

* ಸೋಮವಾರದಿಂದ ಪ್ರೌಢಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು.

* ಸೂಕ್ಷ್ಮ ಜಿಲ್ಲೆಗಳಲ್ಲಿ ಪ್ರಮುಖ ಶಾಲೆಗಳನ್ನು ಎಸ್.ಪಿ ಹಾಗೂ ಡಿ.ಸಿಗಳು ಭೇಟಿ ಮಾಡಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಅಹಿತಕರ ಘಟನೆಗಳು ಆಗದಂತೆ ಎಚ್ಚರ ವಹಿಸಬೇಕು.

* ಶಾಲಾ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು ಹಾಗೂ ಆಡಳಿತ ಮಂಡಳಿಯೊಂದಿಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ಹಾಗೂ ಡಿಡಿಪಿಐ ಅವರು ನಿರಂತರ ಸಂಪರ್ಕ ಹೊಂದಿರಬೇಕು.

* ಜಿಲ್ಲೆಯ ಹಿರಿಯರು, ಪ್ರಮುಖರು, ಜನಪ್ರತಿನಿಧಿಗಳೊಂದಿಗೂ ನಿರಂತರ ಸಂಪರ್ಕ ಹೊಂದುವುದು.

* ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಶಾಂತಿ ಸಭೆಯನ್ನು ನಡೆಸಿ ಉಚ್ಚ ನ್ಯಾಯಾಲಯದ ಆದೇಶವನ್ನು ಅಕ್ಷರಶಃ ಪಾಲಿಸಬೇಕು.

* ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಬೇಕು.

* ಯಾವುದೇ ಒತ್ತಡಕ್ಕೆ ಮಣಿಯಬಾರದು. ಸಣ್ಣ ಘಟನೆಯನ್ನೂ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು.

* ಆದ್ಯತೆ ಮೇರೆಗೆ ಕಾನೂನು ಸುವ್ಯವಸ್ಥೆ ಕಾಪಾಡುವುದು.

* ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸಭೆಗಳನ್ನು ನಡೆಸಬೇಕು.

* ಹೊರಗಿನ ಪ್ರಚೋದನೆಗೆ ಒಳಗಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಪ್ರದೇಶಗಳನ್ನು ಹಂಚಿಕೆ ಮಾಡಿಕೊಂಡು ನಿಗಾ ವಹಿಸಬೇಕು.

* ಎಲ್ಲಾ ರಾಜಕೀಯ ಪಕ್ಷಗಳನ್ನು, ಧಾರ್ಮಿಕ ಮುಖಂಡರನ್ನು ಸ್ಥಳೀಯ ಅಧಿಕಾರಿಗಳು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.

* ಸಾಮಾಜಿಕ ಮಾಧ್ಯಮಗಳ ಮೂಲಕ ವದಂತಿ ಹಾಗೂ ಪ್ರಚೋದನಕಾರಿ ಸಂದೇಶಗಳು ಹರಡದಂತೆ ನಿಗಾ ವಹಿಸಬೇಕು.

* ಎಲ್ಲಾ ಸಂಘ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.

* ಪ್ರಾಂಶುಪಾಲರು ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳಬೇಕು.

* ಪ್ರತಿಯೊಬ್ಬರೂ ಉಚ್ಚ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಒಂದು ಅಹಿತಕರ ಘಟನೆ ಜರಗದಂತೆ ಕಟ್ಟೆಚ್ಚರ ವಹಿಸಬೇಕು.

* ಸಮಾಜಘಾತುಕ ಶಕ್ತಿಗಳನ್ನು ಗುರುತಿಸಿ ಅವರ ಮೇಲೆ ನಿಗಾ ವಹಿಸಲಾಗಿದೆ ಎಂಬ ಸಂದೇಶ ರವಾನಿಸಬೇಕು.

* ಮೇಲಿನಿಂದ ಯಾವುದೇ ಆದೇಶಗಳಿಗೆ ಕಾಯದೇ, ಸಂದರ್ಭಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಬೇಕು.

* ಮಾಧ್ಯಮಗಳಿಗೆ ಜಿಲ್ಲೆಗಳಲ್ಲಿನ ವಸ್ತುಸ್ಥಿತಿಯನ್ನು ಸರಿಯಾಗಿ ವಿವರಿಸಬೇಕು. ತಪ್ಪು ಮಾಹಿತಿ ಹೋಗದಂತೆ ಎಚ್ಚರ ವಹಿಸಬೇಕು

ಇತ್ತೀಚಿನ ಸುದ್ದಿ

ಜಾಹೀರಾತು