10:11 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 6ರಿಂದ 8ನೇ ತರಗತಿ ಶಿಕ್ಷಕ ಹುದ್ದೆಗೆ ಪದವಿ ಕಡ್ಡಾಯ: ಸರಕಾರದ ಕರಡು ನಿಯಮ ಪ್ರಕಟ

22/01/2022, 12:06

ಬೆಂಗಳೂರು(reporterkarnataka.com):

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 6ರಿಂದ 8 ನೇ ತರಗತಿ ಶಿಕ್ಷಕ ಹುದ್ದೆಗಳಿಗೆ ಪದವಿ ಕಡ್ಡಾಯ ಸೇರಿದಂತೆ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಅನೇಕ ಬದಲಾವಣೆಗಳನ್ನು ಮಾಡಿ ರಾಜ್ಯ ಸರ್ಕಾರ ಕರಡು ನಿಯಮಾವಳಿ ಪ್ರಕಟಿಸಿದೆ.

ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶಿಕ್ಷಕ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ಫಲಿತಾಂಶದ ಶೇ.50ರಷ್ಟು ಅಂಕ, ಅರ್ಜಿ ಸಲ್ಲಿಸಲು ಅರ್ಹತೆಗಾಗಿ ಪ್ರತಿ ವರ್ಷ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷಾ (TET) ಫಲಿತಾಂಶದ ಶೇ. 20 ರಷ್ಟು ಅಂಕ, ಪದವಿಯ ಶೇ. 20ರಷ್ಟು ಮತ್ತು ಬಿ.ಇಡಿ. ಡಿಎಡ್ ಸೇರಿದಂತೆ ಅರ್ಹ ಶಿಕ್ಷಕರ ಶಿಕ್ಷಣದ ಶೇ. 10 ರಷ್ಟು ಅಂಕಗಳನ್ನು ಪರಿಗಣಿಸಲಾಗುತ್ತದೆ. ನೇಮಕಗೊಂಡವರಿಗೆ 14,550 ರಿಂದ 26,700 ರೂ.ವರೆಗೆ ಮೂಲ ವೇತನ ಶ್ರೇಣಿ ನಿಗದಿಪಡಿಸಲಾಗಿದೆ.

ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶಿಕ್ಷಕರಾಗಲು ಇನ್ಮುಂದೆ ಪದವಿಯಲ್ಲಿ ಕಡ್ಡಾಯವಾಗಿ ಸೇ. 50 ಕ್ಕಿಂತ ಹೆಚ್ಚು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಕನ್ನಡ, ಇಂಗ್ಲಿಷ್, ಹಿಂದಿ ಸೇರಿದಂತೆ ಯಾವುದೇ ಭಾಷಾ ವಿಷಯವನ್ನು ಪದವಿಯಲ್ಲಿ ಐಚ್ಛಿಕ ವಿಷಯವಾಗಿ ಅಭ್ಯಾಸ ಮಾಡಿರಬೇಕು. ಜೊತೆಗೆ ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಇತಿಹಾಸ,ಭೂಗೋಳ ಶಾಸ್ತ್ರ ಈ ಯಾವುದಾದರೂ ಒಂದು ವಿಷಯವನ್ನು ಮತ್ತೊಂದು ಐಚ್ಛಿಕ ವಿಷಯವಾಗಿ ಅಭ್ಯಾಸ ಮಾಡಬೇಕು ಎಂದು ಕರಡು ನಿಯಮಾವಳಿಯಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು