7:49 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 6ರಿಂದ 8ನೇ ತರಗತಿ ಶಿಕ್ಷಕ ಹುದ್ದೆಗೆ ಪದವಿ ಕಡ್ಡಾಯ: ಸರಕಾರದ ಕರಡು ನಿಯಮ ಪ್ರಕಟ

22/01/2022, 12:06

ಬೆಂಗಳೂರು(reporterkarnataka.com):

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 6ರಿಂದ 8 ನೇ ತರಗತಿ ಶಿಕ್ಷಕ ಹುದ್ದೆಗಳಿಗೆ ಪದವಿ ಕಡ್ಡಾಯ ಸೇರಿದಂತೆ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಅನೇಕ ಬದಲಾವಣೆಗಳನ್ನು ಮಾಡಿ ರಾಜ್ಯ ಸರ್ಕಾರ ಕರಡು ನಿಯಮಾವಳಿ ಪ್ರಕಟಿಸಿದೆ.

ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶಿಕ್ಷಕ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ಫಲಿತಾಂಶದ ಶೇ.50ರಷ್ಟು ಅಂಕ, ಅರ್ಜಿ ಸಲ್ಲಿಸಲು ಅರ್ಹತೆಗಾಗಿ ಪ್ರತಿ ವರ್ಷ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷಾ (TET) ಫಲಿತಾಂಶದ ಶೇ. 20 ರಷ್ಟು ಅಂಕ, ಪದವಿಯ ಶೇ. 20ರಷ್ಟು ಮತ್ತು ಬಿ.ಇಡಿ. ಡಿಎಡ್ ಸೇರಿದಂತೆ ಅರ್ಹ ಶಿಕ್ಷಕರ ಶಿಕ್ಷಣದ ಶೇ. 10 ರಷ್ಟು ಅಂಕಗಳನ್ನು ಪರಿಗಣಿಸಲಾಗುತ್ತದೆ. ನೇಮಕಗೊಂಡವರಿಗೆ 14,550 ರಿಂದ 26,700 ರೂ.ವರೆಗೆ ಮೂಲ ವೇತನ ಶ್ರೇಣಿ ನಿಗದಿಪಡಿಸಲಾಗಿದೆ.

ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶಿಕ್ಷಕರಾಗಲು ಇನ್ಮುಂದೆ ಪದವಿಯಲ್ಲಿ ಕಡ್ಡಾಯವಾಗಿ ಸೇ. 50 ಕ್ಕಿಂತ ಹೆಚ್ಚು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಕನ್ನಡ, ಇಂಗ್ಲಿಷ್, ಹಿಂದಿ ಸೇರಿದಂತೆ ಯಾವುದೇ ಭಾಷಾ ವಿಷಯವನ್ನು ಪದವಿಯಲ್ಲಿ ಐಚ್ಛಿಕ ವಿಷಯವಾಗಿ ಅಭ್ಯಾಸ ಮಾಡಿರಬೇಕು. ಜೊತೆಗೆ ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಇತಿಹಾಸ,ಭೂಗೋಳ ಶಾಸ್ತ್ರ ಈ ಯಾವುದಾದರೂ ಒಂದು ವಿಷಯವನ್ನು ಮತ್ತೊಂದು ಐಚ್ಛಿಕ ವಿಷಯವಾಗಿ ಅಭ್ಯಾಸ ಮಾಡಬೇಕು ಎಂದು ಕರಡು ನಿಯಮಾವಳಿಯಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು