4:52 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 6ರಿಂದ 8ನೇ ತರಗತಿ ಶಿಕ್ಷಕ ಹುದ್ದೆಗೆ ಪದವಿ ಕಡ್ಡಾಯ: ಸರಕಾರದ ಕರಡು ನಿಯಮ ಪ್ರಕಟ

22/01/2022, 12:06

ಬೆಂಗಳೂರು(reporterkarnataka.com):

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 6ರಿಂದ 8 ನೇ ತರಗತಿ ಶಿಕ್ಷಕ ಹುದ್ದೆಗಳಿಗೆ ಪದವಿ ಕಡ್ಡಾಯ ಸೇರಿದಂತೆ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಅನೇಕ ಬದಲಾವಣೆಗಳನ್ನು ಮಾಡಿ ರಾಜ್ಯ ಸರ್ಕಾರ ಕರಡು ನಿಯಮಾವಳಿ ಪ್ರಕಟಿಸಿದೆ.

ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶಿಕ್ಷಕ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ಫಲಿತಾಂಶದ ಶೇ.50ರಷ್ಟು ಅಂಕ, ಅರ್ಜಿ ಸಲ್ಲಿಸಲು ಅರ್ಹತೆಗಾಗಿ ಪ್ರತಿ ವರ್ಷ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷಾ (TET) ಫಲಿತಾಂಶದ ಶೇ. 20 ರಷ್ಟು ಅಂಕ, ಪದವಿಯ ಶೇ. 20ರಷ್ಟು ಮತ್ತು ಬಿ.ಇಡಿ. ಡಿಎಡ್ ಸೇರಿದಂತೆ ಅರ್ಹ ಶಿಕ್ಷಕರ ಶಿಕ್ಷಣದ ಶೇ. 10 ರಷ್ಟು ಅಂಕಗಳನ್ನು ಪರಿಗಣಿಸಲಾಗುತ್ತದೆ. ನೇಮಕಗೊಂಡವರಿಗೆ 14,550 ರಿಂದ 26,700 ರೂ.ವರೆಗೆ ಮೂಲ ವೇತನ ಶ್ರೇಣಿ ನಿಗದಿಪಡಿಸಲಾಗಿದೆ.

ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶಿಕ್ಷಕರಾಗಲು ಇನ್ಮುಂದೆ ಪದವಿಯಲ್ಲಿ ಕಡ್ಡಾಯವಾಗಿ ಸೇ. 50 ಕ್ಕಿಂತ ಹೆಚ್ಚು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಕನ್ನಡ, ಇಂಗ್ಲಿಷ್, ಹಿಂದಿ ಸೇರಿದಂತೆ ಯಾವುದೇ ಭಾಷಾ ವಿಷಯವನ್ನು ಪದವಿಯಲ್ಲಿ ಐಚ್ಛಿಕ ವಿಷಯವಾಗಿ ಅಭ್ಯಾಸ ಮಾಡಿರಬೇಕು. ಜೊತೆಗೆ ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಇತಿಹಾಸ,ಭೂಗೋಳ ಶಾಸ್ತ್ರ ಈ ಯಾವುದಾದರೂ ಒಂದು ವಿಷಯವನ್ನು ಮತ್ತೊಂದು ಐಚ್ಛಿಕ ವಿಷಯವಾಗಿ ಅಭ್ಯಾಸ ಮಾಡಬೇಕು ಎಂದು ಕರಡು ನಿಯಮಾವಳಿಯಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು