11:16 PM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ರಾಜ್ಯದೆಲ್ಲೆಡೆ ಭಾರೀ ಮಳೆ: ಕರಾವಳಿಯಲ್ಲಿ ರೆಡ್, ಮಲೆನಾಡಲ್ಲಿ ಆರೆಂಜ್ ಅಲರ್ಟ್; ಹಲವೆಡೆ ಮರ ಧರಾಶಾಯಿ

17/05/2022, 07:37

ಬೆಂಗಳೂರು(reporterkarnataka.com): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶ ಭರಿತ ಮೋಡಗಳ ಪರಿಣಾಮ ರಾಜ್ಯದಲ್ಲಿ ಸೋಮವಾರದಿಂದ ಮಳೆ ಮತ್ತಷ್ಟು ತೀವ್ರಗೊಂಡಿದೆ.

ಮಲೆನಾಡು, ಕರಾವಳಿ ಸೇರಿ ಬಹುತೇಕ ಕಡೆ ಸೋಮವಾರದಿಂದ ಮಳೆಯಾಗುತ್ತಿದೆ. ಮಲೆನಾಡಲ್ಲಿ ಸಂಜೆ ಮೇಲೆ ಮಳೆಯಾಗುತ್ತಿದೆ.

ಮೇ 18ರಿಂದ ಇನ್ನಷ್ಟು ಚುರುಕು: ಭಾನುವಾರವೂ ಹಲವು ಜಿಲ್ಲೆಗಳಲ್ಲಿ ವರ್ಷಧಾರೆಯಾಗಿದ್ದು, ಬಾಗಲಕೋಟೆಯಲ್ಲಿ 87 ಮಿಮೀ, ಕೋಲಾರದ ಟಮಕಾದಲ್ಲಿ 77 ಮಿಮೀ, ಮೈಸೂರಿನ ಸುತ್ತೂರಿನಲ್ಲಿ 21 ಮಿಮೀ ಮಳೆ ಬಿದ್ದಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 16, 17ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಅಲ್ಲದೆ, ಮೇ,18,19ರಂದು ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚು ಮಳೆ ಬೀಳಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 

ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆಯಲ್ಲಿ ಮುಂದಿನ 4 ದಿನ, ಬೀದರ್, ವಿಜಯಪುರ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ,ಗದಗ, ಹಾವೇರಿ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಮಲೆನಾಡಲ್ಲಿ ಮಳೆಗೆ ಭಾರಿ ಅನಾಹುತ ನಡೆದಿದೆ.ಹಲವೆಡೆ ಮರ ಬಿದ್ದು ರಸ್ತೆ ಬಂದ್ ಆಗಿದೆ. ಇದರ ಪರಿಣಾಮ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಸಾಗರ, ಹೊಸನಗರ, ರಿಪ್ಪಿನಪೇಟೆಯಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು ಒಂದೇ ಸಮನೆ ಮಳೆ ಸುರಿಯುತ್ತಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮಾರ್ಗದಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆಯ ಗಾಂಧಿಘರ್ ಸಮೀಪದಲ್ಲಿ ಬೃಹದಾಕಾರದ ಮರವೊಂದು ರಸ್ತೆಗೆ ಉರುಳಿರುವ ಪರಿಣಾಮ ವಾಹನ ಸಂಚಾರಕ್ಕೆ ಕಳೆದ ಒಂದು ಗಂಟೆಗೂ ಅಧಿಕ ಸಮಯ ವಾಹನ ಸಂಚಾರ ಸ್ಥಗಿತಗೊಂಡಿದೆ. ಇನ್ನು ತೀರ್ಥಹಳ್ಳಿಯ ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಳೆ, ಗುಡುಗಿನ ಆರ್ಭಟಕ್ಕೆ ಕರೆಂಟ್ ಇಲ್ಲದೆ ಜನ ಪರದಾಟ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು