7:02 AM Sunday8 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ರಾಜ್ಯದೆಲ್ಲೆಡೆ ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ಪ್ರಮುಖ ನದಿಗಳು; ಉತ್ತರ ಕರ್ನಾಟಕಕ್ಕೆ ಪ್ರವಾಹದ ಭೀತಿ

08/07/2024, 16:15

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತರು ಮಂಗಳೂರು

info.reporterkarnataka@gmail.com
ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು, ಹಳ್ಳ- ಕೊಳ್ಳ ತುಂಬಿ ಹರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತ್ತವಾಗಿವೆ.


ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಬೆಳಗಾವಿ, ಮೈಸೂರು ಮುಂತಾದ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೃಷ್ಣಾ, ಕಾವೇರಿ, ತುಂಗಾ, ಭದ್ರಾ, ಶರಾವತಿ, ನೇತ್ರಾವತಿ, ಕಾಳಿ ಸೇರಿದಂತೆ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿದ್ದು, ನೆರೆಯ ಭೀತಿ ಉಂಟು ಮಾಡಿದೆ. ಮಹಾರಾಷ್ಟ್ರದ ಕೊಂಕಣ ಪ್ರದೇಶವಾದ ಕೋಯ್ನಾ, ಮಹಾಬಳೇಶ್ವರ, ಕಾಳಮ್ಮವಾಡಿ, ನವಜಾ ಪ್ರದೇಶಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉತ್ತರ ಕರ್ನಾಟಕ ಪ್ರದೇಶದಲ್ಲಿ ಪ್ರವಾಹದ ಕರಿಛಾಯೆ ಆವರಿಸಿದೆ. ಮಹಾರಾಷ್ಟ್ರದ ಕೋಯ್ನಾ ಆಣೆಕಟ್ಟಿನಿಂದ ಭಾರೀ ಪ್ರಮಾಣದಲ್ಲಿ
ಬೆಳಗಾವಿಯ ಕೃಷ್ಣಾ ನದಿಗೆ ನೀರು ಹರಿದು ಬರುತ್ತಿದೆ. ಪ್ರತಿ ವರ್ಷವೂ ಕೋಯ್ನಾ ಅಣೆಕಟ್ಟಿನಿಂದ ಬಿಡುಗಡೆಯಾಗುವ ಅಪಾರ ಪ್ರಮಾಣದ ನೀರಿನಿಂದ ಉತ್ತರ ಕರ್ನಾಟಕದಲ್ಲಿ ಪ್ತವಾಹ ಪರಿಸ್ಥಿತಿ ಉದ್ಭವಿಸುತ್ತಿದೆ. ಈ ಬಾರಿಯೂ ಪ್ರವಾಹದಿಂದ ಹಲವು ಸೇತುವೆಗಳು ಈಗಾಗಲೇ ಮುಳುಗಡೆಯಾಗಿವೆ. ಕೃಷ್ಣಾ, ಧೂದಗಂಗಾ ಹಾಗೂ ವೇದಗಂಗಾ ನದಿಯಲ್ಲಿ 4 ಅಡಿಗಳಷ್ಟು ನೀರು ಹೆಚ್ಚಳವಾಗಿದೆ. ಕರಾವಳಿಯಲ್ಲೂ ಮಳೆಯಿಂದ ಇಲ್ಲಿನ ಪ್ರಮುಖ ನದಿಗಳಾದ ನೇತ್ರಾವತಿ, ಕುಮಾರಧಾರಾ, ಪಯಸ್ವಿನಿ, ಫಲ್ಗುಣಿ, ಸುವರ್ಣ ನದಿಗಳು ತುಂಬಿ ಹರಿಯುತ್ತಿದೆ. ಮಲೆನಾಡು ಜಿಲ್ಲೆಗಳಲ್ಲಿಯೂ ತುಂಗಾ, ಭದ್ರಾ, ಶರಾವತಿ,
ಹೇಮಾವತಿ, ಕಾಳಿ, ಅಘನಾಶಿನಿ ನದಿಗಳು ಉಕ್ಕಿ ಹರಿಯುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು