7:17 AM Friday24 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ರಾಜ್ಯದೆಲ್ಲೆಡೆ ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ಪ್ರಮುಖ ನದಿಗಳು; ಉತ್ತರ ಕರ್ನಾಟಕಕ್ಕೆ ಪ್ರವಾಹದ ಭೀತಿ

08/07/2024, 16:15

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತರು ಮಂಗಳೂರು

info.reporterkarnataka@gmail.com
ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು, ಹಳ್ಳ- ಕೊಳ್ಳ ತುಂಬಿ ಹರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತ್ತವಾಗಿವೆ.


ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಬೆಳಗಾವಿ, ಮೈಸೂರು ಮುಂತಾದ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೃಷ್ಣಾ, ಕಾವೇರಿ, ತುಂಗಾ, ಭದ್ರಾ, ಶರಾವತಿ, ನೇತ್ರಾವತಿ, ಕಾಳಿ ಸೇರಿದಂತೆ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿದ್ದು, ನೆರೆಯ ಭೀತಿ ಉಂಟು ಮಾಡಿದೆ. ಮಹಾರಾಷ್ಟ್ರದ ಕೊಂಕಣ ಪ್ರದೇಶವಾದ ಕೋಯ್ನಾ, ಮಹಾಬಳೇಶ್ವರ, ಕಾಳಮ್ಮವಾಡಿ, ನವಜಾ ಪ್ರದೇಶಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉತ್ತರ ಕರ್ನಾಟಕ ಪ್ರದೇಶದಲ್ಲಿ ಪ್ರವಾಹದ ಕರಿಛಾಯೆ ಆವರಿಸಿದೆ. ಮಹಾರಾಷ್ಟ್ರದ ಕೋಯ್ನಾ ಆಣೆಕಟ್ಟಿನಿಂದ ಭಾರೀ ಪ್ರಮಾಣದಲ್ಲಿ
ಬೆಳಗಾವಿಯ ಕೃಷ್ಣಾ ನದಿಗೆ ನೀರು ಹರಿದು ಬರುತ್ತಿದೆ. ಪ್ರತಿ ವರ್ಷವೂ ಕೋಯ್ನಾ ಅಣೆಕಟ್ಟಿನಿಂದ ಬಿಡುಗಡೆಯಾಗುವ ಅಪಾರ ಪ್ರಮಾಣದ ನೀರಿನಿಂದ ಉತ್ತರ ಕರ್ನಾಟಕದಲ್ಲಿ ಪ್ತವಾಹ ಪರಿಸ್ಥಿತಿ ಉದ್ಭವಿಸುತ್ತಿದೆ. ಈ ಬಾರಿಯೂ ಪ್ರವಾಹದಿಂದ ಹಲವು ಸೇತುವೆಗಳು ಈಗಾಗಲೇ ಮುಳುಗಡೆಯಾಗಿವೆ. ಕೃಷ್ಣಾ, ಧೂದಗಂಗಾ ಹಾಗೂ ವೇದಗಂಗಾ ನದಿಯಲ್ಲಿ 4 ಅಡಿಗಳಷ್ಟು ನೀರು ಹೆಚ್ಚಳವಾಗಿದೆ. ಕರಾವಳಿಯಲ್ಲೂ ಮಳೆಯಿಂದ ಇಲ್ಲಿನ ಪ್ರಮುಖ ನದಿಗಳಾದ ನೇತ್ರಾವತಿ, ಕುಮಾರಧಾರಾ, ಪಯಸ್ವಿನಿ, ಫಲ್ಗುಣಿ, ಸುವರ್ಣ ನದಿಗಳು ತುಂಬಿ ಹರಿಯುತ್ತಿದೆ. ಮಲೆನಾಡು ಜಿಲ್ಲೆಗಳಲ್ಲಿಯೂ ತುಂಗಾ, ಭದ್ರಾ, ಶರಾವತಿ,
ಹೇಮಾವತಿ, ಕಾಳಿ, ಅಘನಾಶಿನಿ ನದಿಗಳು ಉಕ್ಕಿ ಹರಿಯುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು