4:45 AM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ರಾಜ್ಯದೆಲ್ಲೆಡೆ ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ಪ್ರಮುಖ ನದಿಗಳು; ಉತ್ತರ ಕರ್ನಾಟಕಕ್ಕೆ ಪ್ರವಾಹದ ಭೀತಿ

08/07/2024, 16:15

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತರು ಮಂಗಳೂರು

info.reporterkarnataka@gmail.com
ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು, ಹಳ್ಳ- ಕೊಳ್ಳ ತುಂಬಿ ಹರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತ್ತವಾಗಿವೆ.


ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಬೆಳಗಾವಿ, ಮೈಸೂರು ಮುಂತಾದ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೃಷ್ಣಾ, ಕಾವೇರಿ, ತುಂಗಾ, ಭದ್ರಾ, ಶರಾವತಿ, ನೇತ್ರಾವತಿ, ಕಾಳಿ ಸೇರಿದಂತೆ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿದ್ದು, ನೆರೆಯ ಭೀತಿ ಉಂಟು ಮಾಡಿದೆ. ಮಹಾರಾಷ್ಟ್ರದ ಕೊಂಕಣ ಪ್ರದೇಶವಾದ ಕೋಯ್ನಾ, ಮಹಾಬಳೇಶ್ವರ, ಕಾಳಮ್ಮವಾಡಿ, ನವಜಾ ಪ್ರದೇಶಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉತ್ತರ ಕರ್ನಾಟಕ ಪ್ರದೇಶದಲ್ಲಿ ಪ್ರವಾಹದ ಕರಿಛಾಯೆ ಆವರಿಸಿದೆ. ಮಹಾರಾಷ್ಟ್ರದ ಕೋಯ್ನಾ ಆಣೆಕಟ್ಟಿನಿಂದ ಭಾರೀ ಪ್ರಮಾಣದಲ್ಲಿ
ಬೆಳಗಾವಿಯ ಕೃಷ್ಣಾ ನದಿಗೆ ನೀರು ಹರಿದು ಬರುತ್ತಿದೆ. ಪ್ರತಿ ವರ್ಷವೂ ಕೋಯ್ನಾ ಅಣೆಕಟ್ಟಿನಿಂದ ಬಿಡುಗಡೆಯಾಗುವ ಅಪಾರ ಪ್ರಮಾಣದ ನೀರಿನಿಂದ ಉತ್ತರ ಕರ್ನಾಟಕದಲ್ಲಿ ಪ್ತವಾಹ ಪರಿಸ್ಥಿತಿ ಉದ್ಭವಿಸುತ್ತಿದೆ. ಈ ಬಾರಿಯೂ ಪ್ರವಾಹದಿಂದ ಹಲವು ಸೇತುವೆಗಳು ಈಗಾಗಲೇ ಮುಳುಗಡೆಯಾಗಿವೆ. ಕೃಷ್ಣಾ, ಧೂದಗಂಗಾ ಹಾಗೂ ವೇದಗಂಗಾ ನದಿಯಲ್ಲಿ 4 ಅಡಿಗಳಷ್ಟು ನೀರು ಹೆಚ್ಚಳವಾಗಿದೆ. ಕರಾವಳಿಯಲ್ಲೂ ಮಳೆಯಿಂದ ಇಲ್ಲಿನ ಪ್ರಮುಖ ನದಿಗಳಾದ ನೇತ್ರಾವತಿ, ಕುಮಾರಧಾರಾ, ಪಯಸ್ವಿನಿ, ಫಲ್ಗುಣಿ, ಸುವರ್ಣ ನದಿಗಳು ತುಂಬಿ ಹರಿಯುತ್ತಿದೆ. ಮಲೆನಾಡು ಜಿಲ್ಲೆಗಳಲ್ಲಿಯೂ ತುಂಗಾ, ಭದ್ರಾ, ಶರಾವತಿ,
ಹೇಮಾವತಿ, ಕಾಳಿ, ಅಘನಾಶಿನಿ ನದಿಗಳು ಉಕ್ಕಿ ಹರಿಯುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು