8:47 PM Friday25 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ರಾಜ್ಯಾದ್ಯಂತ ಏ.1ರಿಂದ 3 ದಿನ ‘ಸರಕಾರಿ ಆಸ್ಪತ್ರೆ’ಗಳಲ್ಲಿ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ

28/03/2022, 10:27

ಬೆಂಗಳೂರು(reporterkarnataka.com): ರಾಜ್ಯಾದ್ಯಂತ 30 ಸಾವಿರಕ್ಕೂ ಹೆಚ್ಚು ನೌಕರರು ಆರೋಗ್ಯ ಇಲಾಖೆಯಲ್ಲಿಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಅವರೆಲ್ಲರನ್ನು ಏಪ್ರಿಲ್ 1ರಂದು ಕರ್ತವ್ಯದಿಂದ ಬಿಡುಗಡೆ ಮಾಡಿ, ಮತ್ತೆ ಏಪ್ರಿಲ್ 2ರಿಂದ ಸೇವೆಗೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ.

ಈ ಹಿನ್ನಲೆಯಲ್ಲಿ ಏಪ್ರಿಲ್ 1ರಂದು ಗುತ್ತಿಗೆ ಹೊರಗುತ್ತಿಗೆ ನೌಕರರ ಸೇವೆ ಸರ್ಕಾರಿ ಆಸ್ಪತ್ರೆಗಳಲ್ಲಿ ರಾಜ್ಯಾಧ್ಯಂತ ಲಭ್ಯವಾಗೋದಿಲ್ಲ. ಅಲ್ಲದೇ ಏಪ್ರಿಲ್ 2ರಂದು ಯುಗಾದಿ ರಜೆ ಇರಲಿದೆ.

ಏಪ್ರಿಲ್ 3ರಂದು ಶನಿವಾರ ಒಂದು ದಿನ ಆರೋಗ್ಯ ಸೇವೆ ಲಭ್ಯವಾಗಲಿದೆ, ಏಪ್ರಿಲ್ 4ರಂದು ಭಾನುವಾರವಾದ ಕಾರಣ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ  ಆರೋಗ್ಯ ಸೇವೆಯಲ್ಲಿ 3 ದಿನ ವ್ಯತ್ಯಯ ಉಂಟಾಗಲಿದೆ.

ರಾಜ್ಯದಲ್ಲಿ ಗುತ್ತಿಗೆ, ಹೊರ ಗುತ್ತಿಗೆ ಆಧಾರದ ನೌಕರರಿಗೆ ಸೇವಾ ಭದ್ರತೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸೋ ನಿಟ್ಟಿನಲ್ಲಿ ಶ್ರೀನಿವಾಸಾಚಾರಿಯವರ ಸಮಿತಿಯು, ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿತ್ತು. ಈ ವರದಿ ಸಲ್ಲಿಕೆಯಾಗಿ ವರ್ಷಗಳೇ ಕಳೆದು ಬಂದಿದ್ದರು, ವರದಿಯಲ್ಲಿನ ಶಿಫಾರಸ್ಸುಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಮತ್ತೆ ಪ್ರತಿಭಟನೆಗೂ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರು ಕರೆ ನೀಡಿದ್ದರು.ಆದ್ರೇ.. ವಿಧಾನ ಪರಿಷತ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಈ ಸಂಬಂಧ ಮಾತನಾಡಿ ಶ್ರೀನಿವಾಸಾಚಾರಿ ವರದಿಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳೋದಾಗಿಯೂ ತಿಳಿಸಿದ್ದರು. ಹೀಗಾಗಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು