2:11 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ರಾಜ್ಯಾದ್ಯಂತ ಏ.1ರಿಂದ 3 ದಿನ ‘ಸರಕಾರಿ ಆಸ್ಪತ್ರೆ’ಗಳಲ್ಲಿ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ

28/03/2022, 10:27

ಬೆಂಗಳೂರು(reporterkarnataka.com): ರಾಜ್ಯಾದ್ಯಂತ 30 ಸಾವಿರಕ್ಕೂ ಹೆಚ್ಚು ನೌಕರರು ಆರೋಗ್ಯ ಇಲಾಖೆಯಲ್ಲಿಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಅವರೆಲ್ಲರನ್ನು ಏಪ್ರಿಲ್ 1ರಂದು ಕರ್ತವ್ಯದಿಂದ ಬಿಡುಗಡೆ ಮಾಡಿ, ಮತ್ತೆ ಏಪ್ರಿಲ್ 2ರಿಂದ ಸೇವೆಗೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ.

ಈ ಹಿನ್ನಲೆಯಲ್ಲಿ ಏಪ್ರಿಲ್ 1ರಂದು ಗುತ್ತಿಗೆ ಹೊರಗುತ್ತಿಗೆ ನೌಕರರ ಸೇವೆ ಸರ್ಕಾರಿ ಆಸ್ಪತ್ರೆಗಳಲ್ಲಿ ರಾಜ್ಯಾಧ್ಯಂತ ಲಭ್ಯವಾಗೋದಿಲ್ಲ. ಅಲ್ಲದೇ ಏಪ್ರಿಲ್ 2ರಂದು ಯುಗಾದಿ ರಜೆ ಇರಲಿದೆ.

ಏಪ್ರಿಲ್ 3ರಂದು ಶನಿವಾರ ಒಂದು ದಿನ ಆರೋಗ್ಯ ಸೇವೆ ಲಭ್ಯವಾಗಲಿದೆ, ಏಪ್ರಿಲ್ 4ರಂದು ಭಾನುವಾರವಾದ ಕಾರಣ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ  ಆರೋಗ್ಯ ಸೇವೆಯಲ್ಲಿ 3 ದಿನ ವ್ಯತ್ಯಯ ಉಂಟಾಗಲಿದೆ.

ರಾಜ್ಯದಲ್ಲಿ ಗುತ್ತಿಗೆ, ಹೊರ ಗುತ್ತಿಗೆ ಆಧಾರದ ನೌಕರರಿಗೆ ಸೇವಾ ಭದ್ರತೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸೋ ನಿಟ್ಟಿನಲ್ಲಿ ಶ್ರೀನಿವಾಸಾಚಾರಿಯವರ ಸಮಿತಿಯು, ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿತ್ತು. ಈ ವರದಿ ಸಲ್ಲಿಕೆಯಾಗಿ ವರ್ಷಗಳೇ ಕಳೆದು ಬಂದಿದ್ದರು, ವರದಿಯಲ್ಲಿನ ಶಿಫಾರಸ್ಸುಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಮತ್ತೆ ಪ್ರತಿಭಟನೆಗೂ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರು ಕರೆ ನೀಡಿದ್ದರು.ಆದ್ರೇ.. ವಿಧಾನ ಪರಿಷತ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಈ ಸಂಬಂಧ ಮಾತನಾಡಿ ಶ್ರೀನಿವಾಸಾಚಾರಿ ವರದಿಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳೋದಾಗಿಯೂ ತಿಳಿಸಿದ್ದರು. ಹೀಗಾಗಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು