9:37 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ರಾಜ್ಯಾದ್ಯಂತ ಏ.1ರಿಂದ 3 ದಿನ ‘ಸರಕಾರಿ ಆಸ್ಪತ್ರೆ’ಗಳಲ್ಲಿ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ

28/03/2022, 10:27

ಬೆಂಗಳೂರು(reporterkarnataka.com): ರಾಜ್ಯಾದ್ಯಂತ 30 ಸಾವಿರಕ್ಕೂ ಹೆಚ್ಚು ನೌಕರರು ಆರೋಗ್ಯ ಇಲಾಖೆಯಲ್ಲಿಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಅವರೆಲ್ಲರನ್ನು ಏಪ್ರಿಲ್ 1ರಂದು ಕರ್ತವ್ಯದಿಂದ ಬಿಡುಗಡೆ ಮಾಡಿ, ಮತ್ತೆ ಏಪ್ರಿಲ್ 2ರಿಂದ ಸೇವೆಗೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ.

ಈ ಹಿನ್ನಲೆಯಲ್ಲಿ ಏಪ್ರಿಲ್ 1ರಂದು ಗುತ್ತಿಗೆ ಹೊರಗುತ್ತಿಗೆ ನೌಕರರ ಸೇವೆ ಸರ್ಕಾರಿ ಆಸ್ಪತ್ರೆಗಳಲ್ಲಿ ರಾಜ್ಯಾಧ್ಯಂತ ಲಭ್ಯವಾಗೋದಿಲ್ಲ. ಅಲ್ಲದೇ ಏಪ್ರಿಲ್ 2ರಂದು ಯುಗಾದಿ ರಜೆ ಇರಲಿದೆ.

ಏಪ್ರಿಲ್ 3ರಂದು ಶನಿವಾರ ಒಂದು ದಿನ ಆರೋಗ್ಯ ಸೇವೆ ಲಭ್ಯವಾಗಲಿದೆ, ಏಪ್ರಿಲ್ 4ರಂದು ಭಾನುವಾರವಾದ ಕಾರಣ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ  ಆರೋಗ್ಯ ಸೇವೆಯಲ್ಲಿ 3 ದಿನ ವ್ಯತ್ಯಯ ಉಂಟಾಗಲಿದೆ.

ರಾಜ್ಯದಲ್ಲಿ ಗುತ್ತಿಗೆ, ಹೊರ ಗುತ್ತಿಗೆ ಆಧಾರದ ನೌಕರರಿಗೆ ಸೇವಾ ಭದ್ರತೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸೋ ನಿಟ್ಟಿನಲ್ಲಿ ಶ್ರೀನಿವಾಸಾಚಾರಿಯವರ ಸಮಿತಿಯು, ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿತ್ತು. ಈ ವರದಿ ಸಲ್ಲಿಕೆಯಾಗಿ ವರ್ಷಗಳೇ ಕಳೆದು ಬಂದಿದ್ದರು, ವರದಿಯಲ್ಲಿನ ಶಿಫಾರಸ್ಸುಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಮತ್ತೆ ಪ್ರತಿಭಟನೆಗೂ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರು ಕರೆ ನೀಡಿದ್ದರು.ಆದ್ರೇ.. ವಿಧಾನ ಪರಿಷತ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಈ ಸಂಬಂಧ ಮಾತನಾಡಿ ಶ್ರೀನಿವಾಸಾಚಾರಿ ವರದಿಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳೋದಾಗಿಯೂ ತಿಳಿಸಿದ್ದರು. ಹೀಗಾಗಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು