3:33 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರಾಜ್ಯಾದ್ಯಂತ ಏ.1ರಿಂದ 3 ದಿನ ‘ಸರಕಾರಿ ಆಸ್ಪತ್ರೆ’ಗಳಲ್ಲಿ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ

28/03/2022, 10:27

ಬೆಂಗಳೂರು(reporterkarnataka.com): ರಾಜ್ಯಾದ್ಯಂತ 30 ಸಾವಿರಕ್ಕೂ ಹೆಚ್ಚು ನೌಕರರು ಆರೋಗ್ಯ ಇಲಾಖೆಯಲ್ಲಿಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಅವರೆಲ್ಲರನ್ನು ಏಪ್ರಿಲ್ 1ರಂದು ಕರ್ತವ್ಯದಿಂದ ಬಿಡುಗಡೆ ಮಾಡಿ, ಮತ್ತೆ ಏಪ್ರಿಲ್ 2ರಿಂದ ಸೇವೆಗೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ.

ಈ ಹಿನ್ನಲೆಯಲ್ಲಿ ಏಪ್ರಿಲ್ 1ರಂದು ಗುತ್ತಿಗೆ ಹೊರಗುತ್ತಿಗೆ ನೌಕರರ ಸೇವೆ ಸರ್ಕಾರಿ ಆಸ್ಪತ್ರೆಗಳಲ್ಲಿ ರಾಜ್ಯಾಧ್ಯಂತ ಲಭ್ಯವಾಗೋದಿಲ್ಲ. ಅಲ್ಲದೇ ಏಪ್ರಿಲ್ 2ರಂದು ಯುಗಾದಿ ರಜೆ ಇರಲಿದೆ.

ಏಪ್ರಿಲ್ 3ರಂದು ಶನಿವಾರ ಒಂದು ದಿನ ಆರೋಗ್ಯ ಸೇವೆ ಲಭ್ಯವಾಗಲಿದೆ, ಏಪ್ರಿಲ್ 4ರಂದು ಭಾನುವಾರವಾದ ಕಾರಣ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ  ಆರೋಗ್ಯ ಸೇವೆಯಲ್ಲಿ 3 ದಿನ ವ್ಯತ್ಯಯ ಉಂಟಾಗಲಿದೆ.

ರಾಜ್ಯದಲ್ಲಿ ಗುತ್ತಿಗೆ, ಹೊರ ಗುತ್ತಿಗೆ ಆಧಾರದ ನೌಕರರಿಗೆ ಸೇವಾ ಭದ್ರತೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸೋ ನಿಟ್ಟಿನಲ್ಲಿ ಶ್ರೀನಿವಾಸಾಚಾರಿಯವರ ಸಮಿತಿಯು, ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿತ್ತು. ಈ ವರದಿ ಸಲ್ಲಿಕೆಯಾಗಿ ವರ್ಷಗಳೇ ಕಳೆದು ಬಂದಿದ್ದರು, ವರದಿಯಲ್ಲಿನ ಶಿಫಾರಸ್ಸುಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಮತ್ತೆ ಪ್ರತಿಭಟನೆಗೂ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರು ಕರೆ ನೀಡಿದ್ದರು.ಆದ್ರೇ.. ವಿಧಾನ ಪರಿಷತ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಈ ಸಂಬಂಧ ಮಾತನಾಡಿ ಶ್ರೀನಿವಾಸಾಚಾರಿ ವರದಿಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳೋದಾಗಿಯೂ ತಿಳಿಸಿದ್ದರು. ಹೀಗಾಗಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು