5:20 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಜ್ಯಪಾಲರ ವಿರುದ್ಧ ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

18/08/2024, 19:12

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಇಂದು ನಂಜನಗೂಡಿನಲ್ಲಿ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು
ಶಾಸಕ ದರ್ಶನ್ ದ್ರುವನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಂಜನಗೂಡು, ವರುಣ ಹಾಗೂ ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಿಳೆಯರು ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತ ಮುಖಂಡರು ಪಟ್ಟಣದ ಹುಲ್ಲಹಳ್ಳಿ ವೃತ್ತದಲ್ಲಿ ಜಮಾಯಿಸಿದ್ದರು.
ಮೈಸೂರು ಊಟಿ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ, ಟೈರ್ ಗೆ ಬೆಂಕಿ ಹಚ್ಚಿ ರಾಜ್ಯಪಾಲರ ಭಾವಚಿತ್ರವನ್ನು ಸುಡುವ ಮೂಲಕ ರಸ್ತೆ ತಡೆ ನಡೆಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ
ಇದು ಬಿಜೆಪಿಯವರ ಪಿತೂರಿ ಬಿಜೆಪಿಯವರ ಕೈಗೊಂಬೆಯಂತೆ ವರ್ತಿಸುತ್ತಿರುವ ರಾಜ್ಯಪಾಲರು ಈ ರೀತಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಹಿಂದೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧವು ಇಂತಹದೇ ದೂರು ನೀಡಿದಾಗ ಏಕೆ ಕ್ರಮ ವಹಿಸಲ್ಲಿಲ್ಲ ರಾಜ್ಯಪಾಲರೇ ?ಎಂದು ಅವರ ವಿರುದ್ಧ ಗುಡುಗಿದರು.
ಖಾಸಗಿ ವ್ಯಕ್ತಿಗಳು ನೀಡಿದ ದೂರಿನ ಮೇಲೆ ಇಂತಹ ಕ್ರಮ ತೆಗೆದುಕೊಳ್ಳಲು ಬರುವುದಿಲ್ಲ. ಇದರ ಹಾಗೂ ರಾಜ್ಯಪಾಲರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಘಟನೆಯ ಬಗ್ಗೆ ವಿವರಿಸಿದರು.


ಮೈಸೂರು- ಊಟಿ ಹೆದ್ದಾರಿ ರಸ್ತೆ ತಡೆ ನಡೆಸಿದ ಪರಿಣಾಮ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶಂಕರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್,, ಮುಖಂಡರುಗಳಾದ ಇಂಧನ ಬಾಬು, ಕರುಳಪುರ ನಾಗರಾಜು, ನಾಗೇಶ್ ರಾಜ್, ಶಿವಣ್ಣ, ಮಂಜುನಾಥ್, ಶ್ರೀಧರ್, ಮಾರುತಿ, ಅಜ್ಗರ್, ಅಕ್ಬರ್ ಅಲಿ, ಮಾದಪ್ಪ, ಶಶಿರೇಖಾ ಕುರಿಹುಂಡಿ ರಾಜು, ಬಾಲರಾಜು, ನೀಲಿ ಸಿದ್ದು ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು