12:09 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದ್ದು ನಿರಾಶಾದಾಯಕ ಪೊಳ್ಳು ಬಜೆಟ್: ಶಾಸಕ ವೇದವ್ಯಾಸ ಕಾಮತ್ ಟೀಕೆ

07/07/2023, 23:45

ಮಂಗಳೂರು(reporterkarnataka.com) ಸಿಎಂ ಸಿದ್ದರಾಮಯ್ಯ ಮಂಡಿಸಿದ ಕಾಂಗ್ರೆಸ್ ಸರಕಾರದ ಬಜೆಟ್ ನಲ್ಲಿ ಯಾವುದೇ ಹೊಸ ಘೋಷಣೆ ಮಾಡದೆ ತೀರಾ ನಿರಾಶಾದಾಯಕವಾಗಿದ್ದು, ಇದೊಂದು ಪೊಳ್ಳು ಬಜೆಟ್ ಆಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಟೀಕಿಸಿದ್ದಾರೆ.
ಬಜೆಟ್ ಮೂಲಕ ಕೇಂದ್ರ ಸರಕಾರವನ್ನು ದೂಷಿಸುವ ಕೆಲಸ ಮಾಡಲಾಗಿದ್ದು ಕೇಂದ್ರ ಸರಕಾರ ಏನು ಮಾಡಿಲ್ಲ ಮತ್ತು ಈ ಹಿಂದಿನ ಬಿಜೆಪಿ ಸರಕಾರ ಈ ರಾಜ್ಯಕ್ಕೆ ಏನೂ ಯೋಜನೆಗಳನ್ನು ಕೊಟ್ಟಿಲ್ಲ ಎಂದು ಬಿಂಬಿಸಲು ಹೊರಟಂತಿದೆ. ಅಲ್ಲದೆ ಮುಂದೆ ನಮ್ಮ ಸರಕಾರಕ್ಕೂ ಏನು ಮಾಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಈ ಬಜೆಟ್ ಮೂಲಕ ಸರಕಾರ ಒಪ್ಪಿಕೊಂಡಂತಿದೆ ಎಂದು ಅವರು ವಿಶ್ಲೇಷಿಸಿದ್ದಾರೆ.
ಇನ್ನು ಕರಾವಳಿಯ ಪಾಲಿಗೆ ಅತ್ಯಂತ ನಿರಾಶದಾಯಕ ಬಜೆಟ್ ಇದಾಗಿದೆ. ಕಾಂಗ್ರೆಸ್ ನವರು ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಕರಾವಳಿಗೆ ಪ್ರತ್ಯೇಕ ಬಜೆಟ್ ನೀಡದೆ ಜನರನ್ನು ವಂಚಿಸಲಾಗಿದೆ. ಯಾವುದೇ ಒಂದು ಹೊಸ ಯೋಜನೆಗಳನ್ನು ಘೋಷಿಸಲಾಗಿಲ್ಲ.
ಇಡೀ ಬಜೆಟ್ ನಲ್ಲಿ ಯಾವುದೇ ಹೊಸ ಘೋಷಣೆಗಳಿಲ್ಲದೆ ಹಿಂದಿನ ಬಿಜೆಪಿ ಸರಕಾರದ ಯೋಜನೆಯನ್ನೇ ಮುಂದುವರಿಸಿ ನಮ್ಮದು ಎಂಬಂತೆ ಬಿಂಬಿಸುವ ಕೆಲಸವನ್ನು ಈ ಬಜೆಟ್ ಮೂಲಕ ಮಾಡಲಾಗಿದೆ. ಅಲ್ಲದೆ ಗ್ಯಾರೆಂಟಿ ಯೋಜನೆಗಳ ವೈಭವೀಕರಣವನ್ನು ಮಾಡಲಾಗಿದ್ದು, ರಾಜ್ಯಕ್ಕೆ ಈ ಬಜೆಟ್ ನಿಂದ ನ್ಯಾಯ ಪೈಸೆ ಉಪಯೋಗ ಇಲ್ಲದಂತಾಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು