11:46 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದ್ದು ನಿರಾಶಾದಾಯಕ ಪೊಳ್ಳು ಬಜೆಟ್: ಶಾಸಕ ವೇದವ್ಯಾಸ ಕಾಮತ್ ಟೀಕೆ

07/07/2023, 23:45

ಮಂಗಳೂರು(reporterkarnataka.com) ಸಿಎಂ ಸಿದ್ದರಾಮಯ್ಯ ಮಂಡಿಸಿದ ಕಾಂಗ್ರೆಸ್ ಸರಕಾರದ ಬಜೆಟ್ ನಲ್ಲಿ ಯಾವುದೇ ಹೊಸ ಘೋಷಣೆ ಮಾಡದೆ ತೀರಾ ನಿರಾಶಾದಾಯಕವಾಗಿದ್ದು, ಇದೊಂದು ಪೊಳ್ಳು ಬಜೆಟ್ ಆಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಟೀಕಿಸಿದ್ದಾರೆ.
ಬಜೆಟ್ ಮೂಲಕ ಕೇಂದ್ರ ಸರಕಾರವನ್ನು ದೂಷಿಸುವ ಕೆಲಸ ಮಾಡಲಾಗಿದ್ದು ಕೇಂದ್ರ ಸರಕಾರ ಏನು ಮಾಡಿಲ್ಲ ಮತ್ತು ಈ ಹಿಂದಿನ ಬಿಜೆಪಿ ಸರಕಾರ ಈ ರಾಜ್ಯಕ್ಕೆ ಏನೂ ಯೋಜನೆಗಳನ್ನು ಕೊಟ್ಟಿಲ್ಲ ಎಂದು ಬಿಂಬಿಸಲು ಹೊರಟಂತಿದೆ. ಅಲ್ಲದೆ ಮುಂದೆ ನಮ್ಮ ಸರಕಾರಕ್ಕೂ ಏನು ಮಾಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಈ ಬಜೆಟ್ ಮೂಲಕ ಸರಕಾರ ಒಪ್ಪಿಕೊಂಡಂತಿದೆ ಎಂದು ಅವರು ವಿಶ್ಲೇಷಿಸಿದ್ದಾರೆ.
ಇನ್ನು ಕರಾವಳಿಯ ಪಾಲಿಗೆ ಅತ್ಯಂತ ನಿರಾಶದಾಯಕ ಬಜೆಟ್ ಇದಾಗಿದೆ. ಕಾಂಗ್ರೆಸ್ ನವರು ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಕರಾವಳಿಗೆ ಪ್ರತ್ಯೇಕ ಬಜೆಟ್ ನೀಡದೆ ಜನರನ್ನು ವಂಚಿಸಲಾಗಿದೆ. ಯಾವುದೇ ಒಂದು ಹೊಸ ಯೋಜನೆಗಳನ್ನು ಘೋಷಿಸಲಾಗಿಲ್ಲ.
ಇಡೀ ಬಜೆಟ್ ನಲ್ಲಿ ಯಾವುದೇ ಹೊಸ ಘೋಷಣೆಗಳಿಲ್ಲದೆ ಹಿಂದಿನ ಬಿಜೆಪಿ ಸರಕಾರದ ಯೋಜನೆಯನ್ನೇ ಮುಂದುವರಿಸಿ ನಮ್ಮದು ಎಂಬಂತೆ ಬಿಂಬಿಸುವ ಕೆಲಸವನ್ನು ಈ ಬಜೆಟ್ ಮೂಲಕ ಮಾಡಲಾಗಿದೆ. ಅಲ್ಲದೆ ಗ್ಯಾರೆಂಟಿ ಯೋಜನೆಗಳ ವೈಭವೀಕರಣವನ್ನು ಮಾಡಲಾಗಿದ್ದು, ರಾಜ್ಯಕ್ಕೆ ಈ ಬಜೆಟ್ ನಿಂದ ನ್ಯಾಯ ಪೈಸೆ ಉಪಯೋಗ ಇಲ್ಲದಂತಾಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು