9:55 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದ್ದು ನಿರಾಶಾದಾಯಕ ಪೊಳ್ಳು ಬಜೆಟ್: ಶಾಸಕ ವೇದವ್ಯಾಸ ಕಾಮತ್ ಟೀಕೆ

07/07/2023, 23:45

ಮಂಗಳೂರು(reporterkarnataka.com) ಸಿಎಂ ಸಿದ್ದರಾಮಯ್ಯ ಮಂಡಿಸಿದ ಕಾಂಗ್ರೆಸ್ ಸರಕಾರದ ಬಜೆಟ್ ನಲ್ಲಿ ಯಾವುದೇ ಹೊಸ ಘೋಷಣೆ ಮಾಡದೆ ತೀರಾ ನಿರಾಶಾದಾಯಕವಾಗಿದ್ದು, ಇದೊಂದು ಪೊಳ್ಳು ಬಜೆಟ್ ಆಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಟೀಕಿಸಿದ್ದಾರೆ.
ಬಜೆಟ್ ಮೂಲಕ ಕೇಂದ್ರ ಸರಕಾರವನ್ನು ದೂಷಿಸುವ ಕೆಲಸ ಮಾಡಲಾಗಿದ್ದು ಕೇಂದ್ರ ಸರಕಾರ ಏನು ಮಾಡಿಲ್ಲ ಮತ್ತು ಈ ಹಿಂದಿನ ಬಿಜೆಪಿ ಸರಕಾರ ಈ ರಾಜ್ಯಕ್ಕೆ ಏನೂ ಯೋಜನೆಗಳನ್ನು ಕೊಟ್ಟಿಲ್ಲ ಎಂದು ಬಿಂಬಿಸಲು ಹೊರಟಂತಿದೆ. ಅಲ್ಲದೆ ಮುಂದೆ ನಮ್ಮ ಸರಕಾರಕ್ಕೂ ಏನು ಮಾಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಈ ಬಜೆಟ್ ಮೂಲಕ ಸರಕಾರ ಒಪ್ಪಿಕೊಂಡಂತಿದೆ ಎಂದು ಅವರು ವಿಶ್ಲೇಷಿಸಿದ್ದಾರೆ.
ಇನ್ನು ಕರಾವಳಿಯ ಪಾಲಿಗೆ ಅತ್ಯಂತ ನಿರಾಶದಾಯಕ ಬಜೆಟ್ ಇದಾಗಿದೆ. ಕಾಂಗ್ರೆಸ್ ನವರು ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಕರಾವಳಿಗೆ ಪ್ರತ್ಯೇಕ ಬಜೆಟ್ ನೀಡದೆ ಜನರನ್ನು ವಂಚಿಸಲಾಗಿದೆ. ಯಾವುದೇ ಒಂದು ಹೊಸ ಯೋಜನೆಗಳನ್ನು ಘೋಷಿಸಲಾಗಿಲ್ಲ.
ಇಡೀ ಬಜೆಟ್ ನಲ್ಲಿ ಯಾವುದೇ ಹೊಸ ಘೋಷಣೆಗಳಿಲ್ಲದೆ ಹಿಂದಿನ ಬಿಜೆಪಿ ಸರಕಾರದ ಯೋಜನೆಯನ್ನೇ ಮುಂದುವರಿಸಿ ನಮ್ಮದು ಎಂಬಂತೆ ಬಿಂಬಿಸುವ ಕೆಲಸವನ್ನು ಈ ಬಜೆಟ್ ಮೂಲಕ ಮಾಡಲಾಗಿದೆ. ಅಲ್ಲದೆ ಗ್ಯಾರೆಂಟಿ ಯೋಜನೆಗಳ ವೈಭವೀಕರಣವನ್ನು ಮಾಡಲಾಗಿದ್ದು, ರಾಜ್ಯಕ್ಕೆ ಈ ಬಜೆಟ್ ನಿಂದ ನ್ಯಾಯ ಪೈಸೆ ಉಪಯೋಗ ಇಲ್ಲದಂತಾಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು