2:37 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಜತೆ ಕೊಡಗಿನ ವಿದ್ಯಾರ್ಥಿಗಳಿಂದ ರಕ್ಷಾ ಬಂಧನ ಆಚರಣೆ: ಬಾಳುಗೋಡು ವಸತಿ ಶಾಲೆಯ ಸಂಭ್ರಮ

12/08/2025, 15:17

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸಿಂಧು ಆಯೋಜಿಸಿದ್ದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಖೆಯ ವಿದ್ಯಾರ್ಥಿಗಳಿಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ರಕ್ಷಾ ಬಂಧನ ಆಚರಿಸಿದರು.
ಪ್ರತಿ ವರ್ಷ ವಿವಿಧ ವಲಯಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಾ ಬಂದಿದ್ದು ಈ ಭಾರಿ ಬುಡಕಟ್ಟು ವಿದ್ಯಾರ್ಥಿಗಳಿಗೆ ರಾಜ್ಯದಿಂದ ರಾಯಚೂರು, ಬೆಳಗಾವಿ, ಕೋಲಾರ ಹಾಗೂ ಕೊಡಗು ಜಿಲ್ಲೆಗಳಿಂದ ಬುಡಕಟ್ಟು ಸಮುದಾಯದ ವಸತಿ ಶಾಲೆಗೆ ಈ ಅವಕಾಶ ಕಲ್ಪಿಸಲಾಗಿತ್ತು. ವಿರಾಜಪೇಟೆಯ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆ ಸಂಗೀತ ಶಿಕ್ಷಕಿ ಕುಮಾರಿ ಕೋಮಲ್, ವಿದ್ಯಾರ್ಥಿಗಳಾದ ಆರನೇ ತರಗತಿಯ ಎಂ. ಎಲ್. ಪ್ರತೀಕ್ಷಾ, ಏಳನೇ ತರಗತಿ ಸಿ. ಎಲ್. ಕನ್ನಿಕಾ, 8ನೇ ತರಗತಿಯ ತನ್ವಿ ತಂಗಮ್ಮ, 9ನೇ ತರಗತಿಯ ಹೆಚ್. ಕೆ. ನೇಹಾ ಮತ್ತು 10ನೇ ತರಗತಿಯ ಕೆ. ಎಂ ಪ್ರಕೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು