5:19 AM Saturday20 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ರಕ್ತದ ಮಡುವಿನಲ್ಲಿ ಪತ್ತೆಯಾದ ವ್ಯಕ್ತಿ ಸಾವು: ಘಟನಾ ಸ್ಥಳದಲ್ಲಿ ನಿಂಬೆಹಣ್ಣು,ಎಲೆ ಅಡಿಕೆ ಪತ್ತೆ; ವಾಮಾಚಾರಕ್ಕಾಗಿ ಕೊಲೆ ಶಂಕೆ

18/10/2024, 17:45

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ರಕ್ತದ ಮಡುವಿನಲ್ಲಿ ಕತ್ತು ಕುಯ್ದ ವ್ಯಕ್ತಿಯೊಬ್ಬರು ನರಳಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಯನ್ನ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ನಿನ್ನೆ ಹುಣ್ಣಿಮೆ ಹಿನ್ನಲೆ ವಾಮಾಚಾರ ನಡೆಸಿ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಇದರ ಕುರುಹುವಾಗಿ ಸ್ಥಳದಲ್ಲಿ ಮಂತ್ರಿಸಿರುವ ನಿಂಬೆಹಣ್ಣು,101 ರೂ. ನಗದು, ಎಲೆ ಅಡಿಕೆ ಕಂಡುಬಂದಿದೆ.
ಮಲ್ಕುಂಡಿ ಗ್ರಾಮದ ಸದಾಶಿವ(43) ಮೃತ ದುರ್ದೈವಿ.


ಮಡುವಿನಹಳ್ಳಿ ಗ್ರಾಮದ ಪ್ರೌಢ ಶಾಲೆಯ ಸಮೀಪ ನೀರು ಹರಿಯುವ ಹಳ್ಳದಲ್ಲಿ ವಾಮಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕತ್ತು ಕೊಯ್ದು ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದ ದೃಶ್ಯ ಸ್ಥಳೀಯರೊಬ್ಬರ ಕಣ್ಣಿಗೆ ಬಿದ್ದಿದೆ. ನಂತರ ಸ್ಥಳೀಯರ ಮಾಹಿತಿ ಮೇರೆಗೆ ಹುಲ್ಲಹಳ್ಳಿ ಠಾಣೆ .ಪಿಎಸ್ಸೈ ಚೇತನ್ ಕುಮಾರ್ ತಮ್ಮ ಸಿಬ್ಬಂದಿಗಳ ಜೊತೆ ಸ್ಥಳಕ್ಕೆ ಆಗಮಿಸಿ ನರಳಾಡುತ್ತಿದ್ದ ಸದಾಶಿವ ನನ್ನು ಆಸ್ಪತ್ರೆಗೆ ಸಾಗಿಸುವಾಗ
ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಮೈಸೂರು ಜಿಲ್ಲಾ ಎಸ್ಪಿ ವಿಷ್ಣುವರ್ಧನ ಹಾಗೂ ನಂಜನಗೂಡು ಡಿವೈಎಸ್ಪಿ ರಘು ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು