10:53 PM Monday27 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ರಕ್ತದಾನದ ಮೂಲಕ ಜೀವ ಉಳಿಸುವ ಕಾರ್ಯ ಶ್ಲಾಘನೀಯ: ಶಾಸಕ ಡಾ.ಭರತ್ ಶೆಟ್ಟಿ

18/03/2024, 20:25

ಅಡ್ಯಾರ್(reporterkarnataka.com): ಹಿಂದೂ ಯುವ ಸೇನೆ ವೃಕ್ಷರಾಜ ಶಾಖೆ ಮತ್ತು ವೃಕ್ಷರಾಜ ಫ್ರೆಂಡ್ಸ್ ಕ್ಲಬ್ ಗ್ರಾಮೀಣಾಭಿವೃದ್ಧಿ ಕೇಂದ್ರ ಅಡ್ಯಾರ್ ಪದವು ವತಿಯಿಂದ ಇದರ 22ನೇ ವಾರ್ಷಿಕೋತ್ಸವದ ಅಂಗವಾಗಿ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ಭಾನುವಾರ ವೃಕ್ಷರಾಜ ಸಭಾ ಭವನದಲ್ಲಿ ರಕ್ತದಾನ ಶಿಬಿರ ನಡೆಯಿತು.


ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ, ವೈ ಚಾಲನೆ ನೀಡಿ, ಯಾವುದೇ ಸಂಘಟನೆಗಳು ಸಮಾಜಕ್ಕೆ ನೆರವಾದಾಗ ,ಜನರ ಕಷ್ಟಗಳಿಗೆ ಸ್ಪಂದಿಸಿದಾಗ ಜನರ ವಿಶ್ವಾಸ, ಗೌರವಕ್ಕೆ ಪಾತ್ರವಾಗುತ್ತದೆ .ಸಮಾಜ ಸೇವೆಯ ಮೂಲಕ ಮನೆ ಮಾತಾದ ಸಂಘಟನೆಯು ಇದೀಗ ರಕ್ತದಾನದ ಮೂಲಕ ಜೀವ ಉಳಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಮಂಗಳೂರು ಉತ್ತರ ಮಂಡಲ ಯುವ ಮೋರ್ಚಾದ ಕಾರ್ಯದರ್ಶಿಗಳಾದ ಪ್ರಮೋದ್ , ಕೋಡ್ದಬ್ಬು ಪಂಜುರ್ಲಿ ದೈವಸ್ಥಾನದ ಮೋಹನ್ ಸಾಲ್ಯಾನ್ , ಕೋಟಿ ಗುರಿಕಾರ, ಜೈ ಆಂಜನೇಯ ರೈಸ್ಲಿಂಗ್ ಸೆಂಟರ್ ನ ಯೋಗ ಶಿಕ್ಷಕರಾದ ಸುಧೀರ್, ವಿಶ್ವ ಹಿಂದೂ ಪರಿಷತ್ ಬಜರಂಗದಳದ ಸಂಯೋಜಕ್ ಉಲ್ಲಾಸ್ , ವೆನ್ಲಾಕ್ ಆಸ್ಪತ್ರೆಯ ಆಂಟನಿ , ವೈದ್ಯರಾದ ಸೆಲ್ವಿ, ಸಂಸ್ಥೆಯ ಅಧ್ಯಕ್ಷ ಹರೀಶ್ ಪೂಜಾರಿ ಮೊದಲಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು