2:05 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ರಾಮ ಭಕ್ತನೆಂದು ಹೇಳುಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರು ಜ.22ರಂದು ಶಾಲಾ ಕಾಲೆಜುಗಳಿಗೆ ರಜೆ ನೀಡಲಿ: ಶಾಸಕ ಡಾ. ಭರತ್ ಶೆಟ್ಟಿ ಆಗ್ರಹ

21/01/2024, 18:37

ಮಂಗಳೂರು(reporterkarnataka.com): ತಾನು ರಾಮ ಭಕ್ತನೆಂದು ಹೇಳುಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.22ರಂದು ಶಾಲಾ ಕಾಲೆಜುಗಳಿಗೆ ರಜೆ ನೀಡುವ ಮೂಲಕ ಮಕ್ಕಳು ತಮ್ಮ ತಮ್ಮ ಮನೆಗಳಲ್ಲಿ ಕುಟುಂಬ ಸಮೇತ ಸಂಭ್ರಮ,ಪೂಜೆ ಆಚರಿಸಲು ಅವಕಾಶ ನೀಡಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಒತ್ತಾಯಿಸಿದ್ದಾರೆ.
ಶ್ರೀರಾಮನ ಆದರ್ಶ ಬೋಧಿಸುವ ಶಿಕ್ಷಣ ಇಲಾಖೆಯು ಶ್ರೀರಾಮ ಮಂದಿರ ಉದ್ಘಾಟನೆ, ಪ್ರಾಣ ಪ್ರತಿಷ್ಟೆ ಸಂದರ್ಭ ಮಕ್ಕಳು ಕುಟುಂಬ ಸಮೇತ ಪೂಜೆ, ಸಂಭ್ರಮವನ್ನು ಆಚರಿಸಲು ಸೋಮವಾರ ರಾಜ್ಯ ಶಿಕ್ಷಣ ಇಲಾಖೆ ರಜೆ ಸಾರಿಲ್ಲ. ಈ ಮೂಲಕ ಮೂಲಕ ಶಿಕ್ಷಣ ಇಲಾಖೆ ಶ್ರೀರಾಮನ ಆದರ್ಶ ಬೋಧಿಸುವ ನೈತಿಕತೆ ಕಳೆದುಕೊಳ್ಳುತ್ತಿದೆ.
ಮಾತ್ರವಲ್ಲ ಬಹುಸಂಖ್ಯಾತ ಜನರ ಮನಸ್ಸಿಗೆ ಘಾಸಿ ಉಂಟು ಮಾಡುತ್ತಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಅವರು ರಾಜ್ಯ ಸರಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಇಡೀ ದೇಶದಲ್ಲಿ ಹಬ್ಬದ ಸಂಭ್ರಮವಿದೆ. ಮನೆ ಮನೆಯಲ್ಲೂ ದೀಪಾವಳಿ ಅಚರಣೆಗೆ ತಯಾರಿ ನಡೆದಿದೆ. ಶಿಕ್ಷಣ ಇಲಾಖೆ ಮಾತ್ರ ಈ ಸಂಭ್ರಮದಲ್ಲಿ ಮಕ್ಕಳು ಭಾಗವಹಿಸದಂತೆ ರಜೆ ಸಾರದೆ ಪರೋಕ್ಷವಾಗಿ ತಡೆ ಒಡ್ಡಿದೆ.
ಕೆಲವು ಖಾಸಗೀ ಹಾಗೂ ಸರಕಾರಿ ಶಾಲೆಗಳಲ್ಲಿ ಉದ್ದೇಶ ಪೂರ್ವಕವಾಗಿ ಪರೀಕ್ಷೆ ನಡೆಸಲು ಮುಂದಾಗಿರುವುದು ಗಮನಕ್ಕೆ ಬಂದಿದೆ. ಇಂತಹ ಹಿಂದೂ ವಿರೋಧಿ ಭಾವನೆಯನ್ನು ಮಕ್ಕಳಲ್ಲಿ ಬೆಳೆಯಲು ಅವಕಾಶ ನೀಡದೆ ಹಿಂದೂಗಳ ಮನವಿಯನ್ನು ಪರಿಗಣಿಸಿ , ಸರಕಾರ ತತ್ ಕ್ಷಣ ರಜೆ ನೀಡಲು ಶಿಕ್ಷಣ ಇಲಾಖೆಗೆ ಆದೇಶಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.
ಬಹುಸಂಖ್ಯಾತರ ಅದರ್ಶ ಪುರುಷ ಶ್ರೀರಾಮನ ಮಂದಿರವು 500 ವರ್ಷಗಳ ಸುಧೀರ್ಘ ಹೋರಾಟದ ಬಳಿಕ ಅಸ್ಥಿತ್ವಕ್ಕೆ ಬರುತ್ತಿದೆ. ನಮ್ಮ ಪೀಳಿಗೆಗೆ
ಇದನ್ನು ವೀಕ್ಷಿಸಲು ಸಿಕ್ಕಿರುವುದು ಪುಣ್ಯವೆಂದೇ ಭಾವಿಸಿದ್ದೇವೆ. ಈ ಭಾಗ್ಯದಿಂದ ಮಕ್ಕಳನ್ನು ವಂಚಿತರನ್ನಾಗಿ ಮಾಡಿ ಶಿಕ್ಷಣ ಇಲಾಖೆ ಯಾವ ಸಾಧನೆ ಮಾಡಲು ಹೊರಟಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು