3:06 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ರಾಮ ಭಕ್ತನೆಂದು ಹೇಳುಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರು ಜ.22ರಂದು ಶಾಲಾ ಕಾಲೆಜುಗಳಿಗೆ ರಜೆ ನೀಡಲಿ: ಶಾಸಕ ಡಾ. ಭರತ್ ಶೆಟ್ಟಿ ಆಗ್ರಹ

21/01/2024, 18:37

ಮಂಗಳೂರು(reporterkarnataka.com): ತಾನು ರಾಮ ಭಕ್ತನೆಂದು ಹೇಳುಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.22ರಂದು ಶಾಲಾ ಕಾಲೆಜುಗಳಿಗೆ ರಜೆ ನೀಡುವ ಮೂಲಕ ಮಕ್ಕಳು ತಮ್ಮ ತಮ್ಮ ಮನೆಗಳಲ್ಲಿ ಕುಟುಂಬ ಸಮೇತ ಸಂಭ್ರಮ,ಪೂಜೆ ಆಚರಿಸಲು ಅವಕಾಶ ನೀಡಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಒತ್ತಾಯಿಸಿದ್ದಾರೆ.
ಶ್ರೀರಾಮನ ಆದರ್ಶ ಬೋಧಿಸುವ ಶಿಕ್ಷಣ ಇಲಾಖೆಯು ಶ್ರೀರಾಮ ಮಂದಿರ ಉದ್ಘಾಟನೆ, ಪ್ರಾಣ ಪ್ರತಿಷ್ಟೆ ಸಂದರ್ಭ ಮಕ್ಕಳು ಕುಟುಂಬ ಸಮೇತ ಪೂಜೆ, ಸಂಭ್ರಮವನ್ನು ಆಚರಿಸಲು ಸೋಮವಾರ ರಾಜ್ಯ ಶಿಕ್ಷಣ ಇಲಾಖೆ ರಜೆ ಸಾರಿಲ್ಲ. ಈ ಮೂಲಕ ಮೂಲಕ ಶಿಕ್ಷಣ ಇಲಾಖೆ ಶ್ರೀರಾಮನ ಆದರ್ಶ ಬೋಧಿಸುವ ನೈತಿಕತೆ ಕಳೆದುಕೊಳ್ಳುತ್ತಿದೆ.
ಮಾತ್ರವಲ್ಲ ಬಹುಸಂಖ್ಯಾತ ಜನರ ಮನಸ್ಸಿಗೆ ಘಾಸಿ ಉಂಟು ಮಾಡುತ್ತಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಅವರು ರಾಜ್ಯ ಸರಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಇಡೀ ದೇಶದಲ್ಲಿ ಹಬ್ಬದ ಸಂಭ್ರಮವಿದೆ. ಮನೆ ಮನೆಯಲ್ಲೂ ದೀಪಾವಳಿ ಅಚರಣೆಗೆ ತಯಾರಿ ನಡೆದಿದೆ. ಶಿಕ್ಷಣ ಇಲಾಖೆ ಮಾತ್ರ ಈ ಸಂಭ್ರಮದಲ್ಲಿ ಮಕ್ಕಳು ಭಾಗವಹಿಸದಂತೆ ರಜೆ ಸಾರದೆ ಪರೋಕ್ಷವಾಗಿ ತಡೆ ಒಡ್ಡಿದೆ.
ಕೆಲವು ಖಾಸಗೀ ಹಾಗೂ ಸರಕಾರಿ ಶಾಲೆಗಳಲ್ಲಿ ಉದ್ದೇಶ ಪೂರ್ವಕವಾಗಿ ಪರೀಕ್ಷೆ ನಡೆಸಲು ಮುಂದಾಗಿರುವುದು ಗಮನಕ್ಕೆ ಬಂದಿದೆ. ಇಂತಹ ಹಿಂದೂ ವಿರೋಧಿ ಭಾವನೆಯನ್ನು ಮಕ್ಕಳಲ್ಲಿ ಬೆಳೆಯಲು ಅವಕಾಶ ನೀಡದೆ ಹಿಂದೂಗಳ ಮನವಿಯನ್ನು ಪರಿಗಣಿಸಿ , ಸರಕಾರ ತತ್ ಕ್ಷಣ ರಜೆ ನೀಡಲು ಶಿಕ್ಷಣ ಇಲಾಖೆಗೆ ಆದೇಶಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.
ಬಹುಸಂಖ್ಯಾತರ ಅದರ್ಶ ಪುರುಷ ಶ್ರೀರಾಮನ ಮಂದಿರವು 500 ವರ್ಷಗಳ ಸುಧೀರ್ಘ ಹೋರಾಟದ ಬಳಿಕ ಅಸ್ಥಿತ್ವಕ್ಕೆ ಬರುತ್ತಿದೆ. ನಮ್ಮ ಪೀಳಿಗೆಗೆ
ಇದನ್ನು ವೀಕ್ಷಿಸಲು ಸಿಕ್ಕಿರುವುದು ಪುಣ್ಯವೆಂದೇ ಭಾವಿಸಿದ್ದೇವೆ. ಈ ಭಾಗ್ಯದಿಂದ ಮಕ್ಕಳನ್ನು ವಂಚಿತರನ್ನಾಗಿ ಮಾಡಿ ಶಿಕ್ಷಣ ಇಲಾಖೆ ಯಾವ ಸಾಧನೆ ಮಾಡಲು ಹೊರಟಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು