5:52 PM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ರಾಮನಗರ ಎಸ್ ಪಿ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗರಂ: ಬಡವರಿಗೆ ಹೆಚ್ಚು ದಂಡ ವಿಧಿಸಿದರೆ ಧರಣಿಯ ಎಚ್ಚರಿಕೆ

07/03/2022, 21:14

ರಾಮನಗರ(reporterkarnataka.com): ಪೊಲೀಸರಿಗೆ 500 ರೂಪಾಯಿ ವ್ಯಾಲ್ಯೂ ಗೊತ್ತಿರುವುದಿಲ್ಲ. ಆದರೆ ರೈತನಿಗೆ ಪ್ರತಿ ರೂಪಾಯಿಯೂ ಮುಖ್ಯವಾಗಿರುತ್ತೆ. ಇದೇ ರೀತಿ ದಂಡ ವಿಧಿಸುತ್ತಿದ್ದರೆ ಪ್ರತಿಭಟನೆ ಮಾಡುತ್ತೇನೆ. ಎಸ್‌ಪಿ ಕಚೇರಿ ಮುಂದೆ ಧರಣಿ ಕೂರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. 


ಅವನು ಇಲ್ಲಿಗೆ ಏಕೆ ಬಂದಿದ್ದಾನೆಂದು ನನಗೆ ಗೊತ್ತಿದೆ ಎಂದು ರಾಮನಗರ ಎಸ್.ಪಿ ಸಂತೋಷ್ ಬಾಬು ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.

ಇಲ್ಲಿ ಪೊಲೀಸರು ದಂಡ ವಿಧಿಸುವುದು ಹೆಚ್ಚಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರಿಂದ ಕುಮಾರಸ್ವಾಮಿಗೆ ದೂರು ನೀಡಲಾಗಿದೆ. ಈ ವೇಳೆ ಪೊಲೀಸರ ವಿರುದ್ಧ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೀಗೆ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಸರ್ಕಾರ ಪೊಲೀಸರಿಗೆ ಸಂಬಳ ನೀಡುವುದಿಲ್ಲವಾ? ನಾನು ರಾಮನಗರ ಎಸ್‌ಪಿ ಜತೆ ಮಾತನಾಡುವುದಿಲ್ಲ. ನೀವು ಹೋಗಿ ಎಸ್‌ಪಿಯನ್ನು ಕೇಳಿ ಎಂದು ಹೆಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಚನ್ನಪಟ್ಟಣ ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ. ಇಂಜಿನಿಯರ್ ಕರೆದೊಯ್ದು MLCಯಿಂದ ಕೆರೆ ವೀಕ್ಷಣೆ ಮಾಡಲಾಗಿದೆ. ಕೆಲಸ ಮಾಡಿಸ್ತಿರುವುದು ನಾನು, ಸ್ಕೋಪ್ ಬೇರೆಯವರದ್ದು. ಸಿ.ಪಿ. ಯೋಗೇಶ್ವರ್ ಸ್ಕೋಪ್ ತೆಗೆದುಕೊಳ್ಳಲು ಬಂದಿದ್ದಾರೆ ಎಂದು ಇದಕ್ಕೂ ಮೊದಲು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಮಾತನಾಡಿ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಪಾದಯಾತ್ರೆ ಹಣೆಬರಹ ಎಲ್ಲಿಗೆ ಬಂದಿದೆ. 10 ದಿನ ಭೂರಿ ಭೋಜನ ತಿಂದಿದ್ದೇ ಸಿಕ್ಕಿದ್ದು ಇವರಿಗೆ. ಬಜೆಟ್‌ನಲ್ಲಿ 1,000 ಕೋಟಿ ಪಡೆದು ಏನು ಮಾಡ್ತೀರಾ. ಸಾವಿರ ಕೋಟಿಯಲ್ಲಿ ಕೆಲಸ ಮಾಡಲು ಸಾಧ್ಯವೇ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು