9:56 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ರಾಮ ಸೇತುವೆ ನಿರ್ಮಿಸಿದ ಧನುಷ್ಕೋಡಿಗೆ ಪ್ರಧಾನಿ ಮೋದಿ ಭೇಟಿ: ಕೋತಂಡರಾಮ ಸ್ವಾಮಿಗೆ ಪೂಜೆ ಸಲ್ಲಿಕೆ

21/01/2024, 12:17

ಧನುಷ್ಕೋಡಿ(reporterkarnataka.com): ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಒಂದು ದಿನ ಮುನ್ನ ಭಾನುವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಧನುಷ್ಕೋಡಿ ಬಳಿ ರಾಮಸೇತು ನಿರ್ಮಿಸಿದ ಸ್ಥಳವಾದ ಅರಿಚಲ್ ಮುನೈಗೆ ಭೇಟಿ ನೀಡಿದರು.


ಅರಿಚಲ್ ಮುನೈ ಪಾಯಿಂಟ್‌ನಲ್ಲಿ ಮೋದಿಯವರು ಬೈನಾಕ್ಯುಲರ್ ಮೂಲಕ ಸಮುದ್ರ ವೀಕ್ಷಿಸಿದರು.
ರಾವಣನನ್ನು ಸೋಲಿಸಲು ಭಗವಾನ್ ರಾಮನು ಪ್ರತಿಜ್ಞೆ ಮಾಡಿದ ಸ್ಥಳ ಧನುಷ್ಕೋಡಿ ಎಂದು ಪುರಾಣದ ಮೂಲಕ ನಂಬಲಾಗಿದೆ. ಶ್ರೀರಾಮನು ಲಂಕೆಗೆ ತೆರಳಿದ ಪುಣ್ಯಭೂಮಿ ಇದಾಗಿದೆ ಎಂಬ ನಂಬಿಕೆ ಇದೆ.
ಶ್ರೀ ಕೋತಂಡರಾಮ ಸ್ವಾಮಿ ದೇವಸ್ಥಾನದಲ್ಲೂ ಪ್ರಧಾನಿ ಮೋದಿ ಪೂಜೆ ಸಲ್ಲಿಸಲಿದರು. ಕೋದಂಡರಾಮ ಎಂದರೆ ಬಿಲ್ಲು ಹೊಂದಿರುವ ರಾಮ ಎಂದರ್ಥ. ಇದು ಧನುಷ್ಕೋಡಿಯಲ್ಲಿದೆ. ರಾವಣನ ಸಹೋದರ ವಿಭೀಷಣನು ಮೊದಲು ಭಗವಾನ್ ರಾಮನನ್ನು ಭೇಟಿಯಾಗಿ ಆಶ್ರಯವನ್ನು ಕೇಳಿದ್ದು ಇಲ್ಲಿಯೇ ಎಂದು ಹೇಳಲಾಗುತ್ತದೆ. ಶ್ರೀರಾಮನು ವಿಭೀಷಣನ ಪಟ್ಟಾಭಿಷೇಕವನ್ನು ನಡೆಸಿದ ಸ್ಥಳವಾಗಿದೆ ಎಂದು ಕೆಲವು ದಂತಕಥೆಗಳು ಹೇಳುತ್ತವೆ.

ಇತ್ತೀಚಿನ ಸುದ್ದಿ

ಜಾಹೀರಾತು