4:16 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ರಾಮ ಸೇತುವೆ ನಿರ್ಮಿಸಿದ ಧನುಷ್ಕೋಡಿಗೆ ಪ್ರಧಾನಿ ಮೋದಿ ಭೇಟಿ: ಕೋತಂಡರಾಮ ಸ್ವಾಮಿಗೆ ಪೂಜೆ ಸಲ್ಲಿಕೆ

21/01/2024, 12:17

ಧನುಷ್ಕೋಡಿ(reporterkarnataka.com): ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಒಂದು ದಿನ ಮುನ್ನ ಭಾನುವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಧನುಷ್ಕೋಡಿ ಬಳಿ ರಾಮಸೇತು ನಿರ್ಮಿಸಿದ ಸ್ಥಳವಾದ ಅರಿಚಲ್ ಮುನೈಗೆ ಭೇಟಿ ನೀಡಿದರು.


ಅರಿಚಲ್ ಮುನೈ ಪಾಯಿಂಟ್‌ನಲ್ಲಿ ಮೋದಿಯವರು ಬೈನಾಕ್ಯುಲರ್ ಮೂಲಕ ಸಮುದ್ರ ವೀಕ್ಷಿಸಿದರು.
ರಾವಣನನ್ನು ಸೋಲಿಸಲು ಭಗವಾನ್ ರಾಮನು ಪ್ರತಿಜ್ಞೆ ಮಾಡಿದ ಸ್ಥಳ ಧನುಷ್ಕೋಡಿ ಎಂದು ಪುರಾಣದ ಮೂಲಕ ನಂಬಲಾಗಿದೆ. ಶ್ರೀರಾಮನು ಲಂಕೆಗೆ ತೆರಳಿದ ಪುಣ್ಯಭೂಮಿ ಇದಾಗಿದೆ ಎಂಬ ನಂಬಿಕೆ ಇದೆ.
ಶ್ರೀ ಕೋತಂಡರಾಮ ಸ್ವಾಮಿ ದೇವಸ್ಥಾನದಲ್ಲೂ ಪ್ರಧಾನಿ ಮೋದಿ ಪೂಜೆ ಸಲ್ಲಿಸಲಿದರು. ಕೋದಂಡರಾಮ ಎಂದರೆ ಬಿಲ್ಲು ಹೊಂದಿರುವ ರಾಮ ಎಂದರ್ಥ. ಇದು ಧನುಷ್ಕೋಡಿಯಲ್ಲಿದೆ. ರಾವಣನ ಸಹೋದರ ವಿಭೀಷಣನು ಮೊದಲು ಭಗವಾನ್ ರಾಮನನ್ನು ಭೇಟಿಯಾಗಿ ಆಶ್ರಯವನ್ನು ಕೇಳಿದ್ದು ಇಲ್ಲಿಯೇ ಎಂದು ಹೇಳಲಾಗುತ್ತದೆ. ಶ್ರೀರಾಮನು ವಿಭೀಷಣನ ಪಟ್ಟಾಭಿಷೇಕವನ್ನು ನಡೆಸಿದ ಸ್ಥಳವಾಗಿದೆ ಎಂದು ಕೆಲವು ದಂತಕಥೆಗಳು ಹೇಳುತ್ತವೆ.

ಇತ್ತೀಚಿನ ಸುದ್ದಿ

ಜಾಹೀರಾತು