5:35 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ

25/11/2021, 14:36

ಮಂಗಳೂರು(reporterkarnataka.com):

ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಮಂಗಳೂರಿನ ಹೆಮ್ಮೆಯ ಆಧ್ಯಾತ್ಮಿಕ ಕೇಂದ್ರ ರಾಮಕೃಷ್ಣ ಮಠಕ್ಕೆ ಮಂಗಳೂರಿನ ನಾಗರಿಕರಿಂದ ಗೌರವಾಭಿವಂದನೆ ಹಾಗೂ ಪೌರಸಮ್ಮಾನ ಕಾರ್ಯಕ್ರಮ ನ.27ರಂದು ಸಂಜೆ 6 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಗೌರವಾಭಿನಂದನಾ ಸಮಿತಿಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಸಂದರ್ಭದಲ್ಲೆ ಮಂಗಳೂರಿನಲ್ಲಿ ರಾಮಕೃಷ್ಣ ಆಶ್ರಮದ ಸ್ಥಾಪನೆಯಾಯಿತು. ಹೀಗಾಗಿ ದೇಶದ ಅಮೃತ ಮಹೋತ್ಸವ ಸಂದರ್ಭದಲ್ಲಿಯೇ ರಾಮಕೃಷ್ಣ ಮಠ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ ಎಂದರು.

ರಾಜ್ಯ ಸರಕಾರ ನೀಡಿದ ವಿಶೇಷ ಅಮೃತ ಮಹೋತ್ಸವ ರಾಜ್ಯೋತ್ಸವ ಪ್ರಶಸ್ತಿಗೆ ರಾಮಕೃಷ್ಣ ಮಿಶನ್ ಭಾಜನವಾಗಿದೆ. ಹೀಗಾಗಿ ವಿಶೇಷ ಸಂದರ್ಭದಲ್ಲಿ ರಾಮಕೃಷ್ಣ ಮಠಕ್ಕೆ ಸ್ವಚ್ಛ ಮಂಗಳೂರು ಫೌಂಡೇಶನ್ ವತಿಯಿಂದ ಗೌರವಾಭಿವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. 

 ಗೌರಾವಭಿನಂದನಾ ಸಮಿತಿಯ ದಿಲ್‌ರಾಜ್ ಆಳ್ವ, ಉಮಾನಾಥ್ ಕೋಟೆಕಾರ್, ಹರೀಶ್ ಆಚಾರ್ಯ, ಶುಭೋದಯ ಆಳ್ವ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು